ಚಿತ್ತಾಪುರ ಅಗ್ನಿ ಶಾಮಕ ಠಾಣೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಅಗ್ನಿ ಶಾಮಕ ಠಾಣೆಯಲ್ಲಿ ಶನಿವಾರ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಶರಣಯ್ಯ ಗುತ್ತೇದಾರ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜಾ ಸಲ್ಲಿಸಿ ನಂತರ ರಾಷ್ಟ್ರ ದ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಅಗ್ನಿ ಶಾಮಕ ಸಿಬ್ಬಂದಿಗಳಾದ ಸುರೇಶ, ಚಾಂದಶಾ, ಅಕ್ಬರ್ ಪಟೇಲ್, ಮಂಜುನಾಥ್, ಮಲ್ಲಿಕಾರ್ಜುನ್, ಅಮರೇಶ್, ರವೀಂದ್ರ, ಎಂಡಿ ಸಲೀಮ್, ಈರಪ್ಪ ಉಂಡಿ, ಶಿವರಾಜ ಬಿ, ಯಮನಪ್ಪ, ಬಸವರಾಜ, ಕಾಶೀನಾಥ್, ನಭಿಸಾಬ್, ಮಂಜುನಾಥ್ ಪಿ ಉಪಸ್ಥಿತರಿದ್ದರು.

