Oplus_0

ಸಾಹಿತ್ಯ ಓದುವ ಮೂಲಕ ಜೀವನಾನುಭವ ಗಳಿಸಿದರೆ ಬದುಕಿನಲ್ಲಿ ಬರುವ ಸಮಸ್ಯೆಗಳನ್ನು ಎದುರಿಸಲು ಸಾಧ್ಯ: ಡಾ.ಹೊನ್ಕಲ್

ನಾಗಾವಿ ಎಕ್ಸಪ್ರೆಸ್

ಕಲಬುರ್ಗಿ: ವಿಧ್ಯಾರ್ಥಿಗಳು ಪಠ್ಯದ ಜೊತೆಗೆ ಸಾಹಿತ್ಯ ಹಾಗೂ ಜೀವನಾನುಭವ ಪಡೆಯಲು ಸಾಹಿತ್ಯ, ಸಂಗೀತ, ಕಲೆ, ಸಂಸ್ಕೃತಿ ಬಗ್ಗೆ ತಿಳಿದುಕೊಂಡಿರಬೇಕು. ಇದು ಯಾವ ವಿವಿಯೂ ಕಲಿಸುವುದಿಲ್ಲ ಆ ಕಾರಣ ವಿದ್ಯಾರ್ಥಿ ದೆಸೆಯಿಂದಲೇ ಸಾಹಿತ್ಯದ ಮೂಲಕ ಜೀವನಾನುಭವ ಗಳಿಸಿದರೆ ಬದುಕಿನಲ್ಲಿ ಬರುವ ಸಮಸ್ಯೆಗಳನ್ನು ಎದುರಿಸಲು ಸಾಧ್ಯ ಆಗುತ್ತದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಸಿದ್ಧರಾಮ ಹೊನ್ಕಲ್ ಹೇಳಿದರು.

ನಗರದ ಸೆಂಟ್ ಜೋಶೇಫ್ ಪಿಯು ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವತಿಯಿಂದ ಚಕೋರ ಸಾಹಿತ್ಯ ವಿಚಾರ ವೇದಿಕೆ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಲೇಖಕ ಡಾ.ಚಂದ್ರಶೇಖರ ಕಂಬಾರರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕೊಡುಗೆ ಅನನ್ಯ ಎಂದರು. ಇದೇ ಸಂದರ್ಭದಲ್ಲಿ ಚಕೋರ ಸಾಹಿತ್ಯ ವಿಚಾರ ವೇದಿಕೆಯ ಧ್ಯೇಯೋದ್ದೇಶ ಕುರಿತು ಪರಿಚಯಿಸಿದರು.

ಕಾರ್ಯಕ್ರಮದಲ್ಲಿ ಗುಲ್ಬರ್ಗಾ ವಿವಿಯ ಕನ್ನಡ ಅಧ್ಯಯನ ಸಂಸ್ಥೆಯ ಕನ್ನಡ ಉಪನ್ಯಾಸಕ ಡಾ.ಸಂತೋಷಕುಮಾರ ಕಂಬಾರ ಅವರು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ.ಚಂದ್ರಶೇಖರ ಕಂಬಾರರ ಕುರಿತು ಅವರ ಬದುಕು ಬರಹದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ  ಬಿ.ಎಚ್‌.ನಿರಗುಡಿ, ಸಂಸ್ಥೆಯ ಸಂಯೋಜಕ ಶ್ಯಾಮುವೆಲ್ ಎಸ್. ಉಪನ್ಯಾಸಕಿಯರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಪ್ರಾಂಶುಪಾಲ ಡಾ.ಚಿ.ಸಿ.ನಿಂಗಣ್ಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ  ನೂರಾರು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!