Oplus_0

ಇನ್ಫೆಂಟ್ ಜೀಸಸ್ ಶಾಲೆಯಲ್ಲಿ ಅಂತರ ಶಾಲಾ ಕಲಿಕಾ ಸ್ಪರ್ಧೆ, ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ಮತ್ತು ಸಾಧನೆ ಮಾಡಲು ಪೂರಕ

ನಾಗಾವಿ ಎಕ್ಸಪ್ರೆಸ್

ಶಹಾಬಾದ: ಅಂತರ ಶಾಲಾ ಶೈಕ್ಷಣಿಕ ಕಲಿಕಾ ಸ್ಪರ್ಧೆಗಳು ವಿದ್ಯಾರ್ಥಿಗಳನ್ನು ಪ್ರದರ್ಶನ ನೀಡಲು, ಉತ್ತಮ ಸಾಧನೆ ಮಾಡಲು ಮತ್ತು ಆತ್ಮವಿಶ್ವಾಸವನ್ನು ಗಳಿಸಲು ಪ್ರೇರೇಪಿಸುವಲ್ಲಿ ಪೂರಕವಾಗಿದೆ ಎಂದು ಶಹಾಬಾದ ಸಿ.ಆರ್.ಪಿ ಸತ್ಯನಾರಾಯಣ ಹೇಳಿದರು.

ಅವರು ಇನ್ಫೆಂಟ್ ಜೀಸಸ್ ಶಾಲೆಯಲ್ಲಿ ಆಯೋಜಿಸಿದ್ದ 2025 ರ ಅಂತರ ಶಾಲಾ ಶೈಕ್ಷಣಿಕ ಕಲಿಕಾ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಗರದಲ್ಲಿ ಮೊಟ್ಟ ಮೊದಲ ಬಾರಿಗೆ ಆಯೋಜಿಸಲಾಗಿರುವ ಇದು ನಿಜಕ್ಕೂ ಕಲಿಕೆಯ ನಿಜವಾದ ಆಚರಣೆಯಾಗಿದೆ, ಇಲ್ಲಿ ಯಾವುದೇ ನಾಟಕ ವಾಗಲಿ, ನೃತ್ಯವಾಗಲಿ, ಫ್ಯಾಷನ್ ಶೋ ಆಯೋಜಿಸಿಲ್ಲದಿರುವದೆ ಶೈಕ್ಷಣಿಕ ಕಲಿಕೆಗೆ ಪೂರಕ ವಾತಾವರಣ ನಿರ್ಮಾಣ ಮಾಡಿದ್ದಾರೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಶಾಲೆಯ ಮುಖ್ಯ ಗುರು ಅಲೀಮಾ ಜಾನ್ ಮಾತನಾಡಿ, ಶಾಲೆಗಳ ವಿವಿಧ ಕೌಶಲ್ಯ ಮತ್ತು ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಆಸಕ್ತಿ ಹೆಚ್ಚಾಗಿ ಶಿಕ್ಷಣಕ್ಕೆ ಪ್ರೋತ್ಸಾಹಿಸಿದಂತಾಗುತ್ತದೆ, ಅಂತರ ಶಾಲಾ ಕಲಿಕಾ ಸ್ಪರ್ಧೆಯು ಖಂಡಿತವಾಗಿಯೂ ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದೆ ಮತ್ತು ಶೈಕ್ಷಣಿಕ ಸ್ಪರ್ಧೆ ಹಾಗೆ ಸಂಬಂಧವನ್ನು ಬೆಳೆಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ವೇದಿಕೆ ಮೇಲೆ ಪ್ರಾಚಾರ್ಯ ನಾನಾಗೌಡ ಹಿಪ್ಪರಗಿ, ಉಪನ್ಯಾಸಕ ಪೀರ ಪಾಷ, ನಾಗೇಂದ್ರ ಬೇಲೂರು, ಈರಣ್ಣ ಇಟಗಿ ಇದ್ದರು. ನಗರದ ಅಂತರ ಶಾಲಾ ಕಲಿಕಾ ವಿವಿಧ ಸ್ಪರ್ಧೆಗಳಾದ ಭಾಷಣ ಸ್ಫರ್ಧೆ, ಪ್ರಬಂಧ ಸ್ಪರ್ಧೆ, ಬರವಣಿಗೆ ಸುಧಾರಣೆ ಮತ್ತು ರಸ ಪ್ರಶ್ನೆಗಳ ಸ್ಪರ್ಧೆ ಎರ್ಪಡಿಸಲಾಗಿತ್ತು, ನಗರದ 10 ಪ್ರೌಢ ಶಾಲೆಗಳ 60 ವಿದ್ಯಾರ್ಥಿಗಳು ಕಲಿಕಾ ಸ್ಫರ್ಧೆಯಲ್ಲಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಶಾಲೆಯ ಚೇರ್ಮನ್ ಅನಿಲ ಜೋಸೆಫ್ ಜಾನ್, ರಾಕೇಶ ಬನಸೋಡೆ, ವಿಲ್ಸನ್ ಮಾರಿಷ, ಶಗುಪ್ತ, ಸಂಗೀತಾ ಸಜ್ಜನ ಸೇರಿದಂತೆ ವಿವಿಧ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪಾರ್ವತಿ ಸ್ವಾಗತಿಸಿದರು, ಸ್ಟೇಫಿ ನಿರೂಪಿಸಿದರು, ಆಶ್ಮಾ ಖಾನಂ ವಂದಿಸಿದರು.

ಶಹಾಬಾದ ಸುದ್ದಿ- ನಾಗರಾಜ್ ದಂಡಾವತಿ.

Spread the love

Leave a Reply

Your email address will not be published. Required fields are marked *

error: Content is protected !!