ಕಲಬುರಗಿಯಲ್ಲಿ ಏ.29 ರಂದು ಬಸವೇಶ್ವರ ಜಯಂತಿ ನಿಮಿತ್ತ ಏ.19 ರಂದು ಚಿತ್ತಾಪುರದಲ್ಲಿ ಪೂರ್ವಭಾವಿ ಸಭೆ: ಭಂಕಲಗಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕಲಬುರಗಿ ನಗರದಲ್ಲಿ ಏಪ್ರಿಲ್ 29 ರಂದು ನಡೆಯಲಿರುವ ಜಗಜ್ಯೋತಿ ಶೀ ಬಸವೇಶ್ವರ ಜಯಂತೋತ್ಸವದ ಪ್ರಯುಕ್ತ ಪಟ್ಟಣದ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಏ.19 ರಂದು ಮಧ್ಯಾಹ್ನ 1 ಗಂಟೆಗೆ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಆದ್ದರಿಂದ ಮಹಾಸಭಾ ಎಲ್ಲ ಪದಾಧಿಕಾರಿಗಳು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ನಾಗರಾಜ ಭಂಕಲಗಿ ಹೇಳಿದರು.
ಪಟ್ಟಣದ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೂರ್ವಭಾವಿ ಸಭೆಗೆ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಶರಣಕುಮಾರ ಮೋದಿ, ಜಯಂತಿ ಸಮಿತಿ ಜಿಲ್ಲಾಧ್ಯಕ್ಷ ಅಫಜಲಪುರ ಶಾಸಕ ಎಂ.ವೈ.ಪಾಟೀಲ, ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಆಳಂದ ಶಾಸಕ ಬಿ.ಆರ್.ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ಶಶೀಲ್ ನಮೋಶಿ, ಮಾಜಿ ಶಾಸಕರಾದ ಅಮರನಾಥ ಪಾಟೀಲ್, ದೊಡ್ಡಪ್ಪಗೌಡ ಪಾಟೀಲ ಅವರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಏ.16 ರಂದು ಸಂಜೆ 7.30 ಉಡಿ ತುಂಬುವ ಕಾರ್ಯಕ್ರಮಕ್ಕೆ ನಾಲವಾರ ಶ್ರೀ ಡಾ.ಸಿದ್ದತೋಟೇಂದ್ರ ಶಿವಾಚಾರ್ಯರು, ಶ್ರೀ ಶರಣಬಸವೇಶ್ವರ ಸಂಸ್ಥಾನ ಮಠದ ಮಾತೋಶ್ರೀ ಡಾ.ದಾಕ್ಷಾಯಣಿ ಎಸ್.ಅಪ್ಪ, ಬೆಳಗುಂಪಾ ಶ್ರೀ ಪರ್ವತೇಶ್ವರ ಶಿವಾಚಾರ್ಯರು ಆಗಮಿಸಲಿದ್ದಾರೆ ಹಾಗೂ ಏ.17 ರಂದು ಸಂಜೆ ಶರಣಬಸವೇಶ್ವರ ಭವ್ಯ ರಥೋತ್ಸವ ನಡೆಯಲಿದ್ದು ನಂತರ ಚೆನ್ನವೀರ ಬೆಳಗುಂಪಾ ಅವರ ತಂಡದಿಂದ ಹಾಸ್ಯ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಆದ್ದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ವಿಜಯಕುಮಾರ್ ದೇಶಮುಖ್, ರವೀಂದ್ರ ಸಜ್ಜನಶೆಟ್ಟಿ, ಮಲ್ಲರೆಡ್ಡಿ ಗೋಪಸೇನ್, ಆನಂದ ಪಾಟೀಲ ನರಿಬೋಳ, ಅನೀಲ್ ವಡ್ಡಡಗಿ, ಚಂದ್ರಶೇಖರ ಉಟಗೂರ, ಕೋಟೇಶ್ವರ ರೇಷ್ಮಿ, ಅಂಬರೀಷ್ ಸುಲೇಗಾಂವ, ಬಸವರಾಜ ಸಂಕನೂರ, ಸಂತೋಷ ಹಾವೇರಿ, ಪ್ರಸಾದ್ ಅವಂಟಿ, ವೀರಭದ್ರಪ್ಪ ಹುಮನಾಬಾದ, ಸೋಮಶೇಖರ ಯದಲಾಪೂರ, ಶರಣಗೌಡ ಸೂಲಹಳ್ಳಿ, ರಾಚಪ್ಪ ಬೊಮ್ಮನಳ್ಳಿ ಇತರರು ಇದ್ದರು.