Oplus_131072

ಚಿತ್ತಾಪುರ ಬೈಕ್ ಕವರ್‌ನಲ್ಲಿದ್ದ ಹಣ ಕಳ್ಳತನ, ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಪಟ್ಟಣದ ಬಸ್ ನಿಲ್ದಾಣದ ಎದುರುಗಡೆಯ ಅನಮೂಲ್ ಹೋಟೇಲ್ ಹತ್ತಿರ ಬೈಕ್‌ನ ಕವರ್‌ನಲ್ಲಿದ್ದ 1 ಲಕ್ಷ 50 ಸಾವಿರ ರೂ.ವನ್ನು ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಮಂಜುನಾಥ ಕಾಶಿ ಎನ್ನುವವರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಿಂದ 1 ಲಕ್ಷ 50 ಸಾವಿರ ರೂ. ತೆಗೆದುಕೊಂಡು ಬೈಕ್ ಮೇಲೆ ಹೋಗುತ್ತಿದ್ದಾಗ, ಹಿಂದುಗಡೆಯಿಂದ ಬೈಕ್ ನಲ್ಲಿ ಬಂದ ಓರ್ವ ಕಳ್ಳ ನಿಮ್ಮ ಹಣ ಬಿದ್ದಿವೆ ನೋಡಿ ಎಂದು ಹೇಳಿದ ಕೂಡಲೇ ಮಂಜುನಾಥ ಅವರು ಬೈಕ್ ಮೇಲಿಂದ ಇಳಿದು 50 ರೂ.ಗಳ ಮೂರು ನೋಟುಗಳನ್ನು ಎತ್ತಿಕೊಳ್ಳಲು ಹೋಗಿದ್ದಾರೆ. ಈ ವೇಳೆ ಎದರುಗಡೆ ನಿಂತಿದ್ದ ಇನ್ನೊರ್ವ ಕಳ್ಳ ಬೈಕ್‌ ಕವರ್‌ನಲ್ಲಿದ್ದ ಹಣವನ್ನು ತೆಗೆದುಕೊಂಡು ಬೈಕ್ ಮೇಲೆ ಕುಳಿತು ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಪಿಎಸ್ಐ ಶ್ರೀಶೈಲ್ ಅಂಬಾಟಿ, ಸಿಬ್ಬಂದಿಗಳಾದ ಸವಿಕುಮಾರ, ಬಸವರಾಜ, ರವಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Leave a Reply

Your email address will not be published. Required fields are marked *

error: Content is protected !!