ಚಿತ್ತಾಪುರ: ನೀರನ್ನು ಸೋಸಿ ಕಾಯಿಸಿ ಆರಿಸಿ ಕುಡಿಯಲು ಮುಖ್ಯಾಧಿಕಾರಿ ಮನವಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪುರಸಭೆಯಿಂದ ಕಾಗಿಣಾ ನದಿಯಿಂದ ಸರಬರಾಜು ಆಗುವ ನೀರನ್ನು ಸೋಸಿ ಕಾಯಿಸಿ ಆರಿಸಿ ಕುಡಿಯಲು ಬಳಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಕೋರಿದ್ದಾರೆ.
ಪುರಸಭೆಯ ವ್ಯಾಪ್ತಿಯಲ್ಲಿ ಪಟ್ಟಣಕ್ಕೆ ಸರಬರಾಜು ಆಗುತ್ತಿರುವ ಕಾಗಿಣಾ ನದಿಯಲ್ಲಿ ಸತತ 2 ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಹೆಚ್ಚು ಮಣ್ಣು ಮಿಶ್ರಿತ ನೀರು ಶುದ್ಧೀಕರಣ ಘಟಕಕ್ಕೆ ಬರುತ್ತಿದೆ. ಸೂಕ್ತವಾಗಿ ಶುದ್ಧೀಕರಣ ಮಾಡಿದರೂ ಕೂಡಾ ನೀರಿನಲ್ಲಿ ಮಣ್ಣು ಮಿಶ್ರಿತವಾಗುತ್ತಿದೆ. ಕಾರಣ ನದಿಯಲ್ಲಿ ಕಲುಷಿತ ನೀರು ನಿಯಂತ್ರಣಕ್ಕೆ ಬರುವವರೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಿದ್ದಾರೆ.

