ವಾಡಿ ಬಿಜೆಪಿ ಕಚೇರಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನಾಚರಣೆ
ನಾಗಾವಿ ಎಕ್ಸಪ್ರೆಸ್
ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಮುಖಂಡರು ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಕೆಲಸ ಮತ್ತು ಅವರು ಭಾರತೀಯ ಸಮಾಜಕ್ಕೆ ತಂದ ಬದಲಾವಣೆಗಳನ್ನು ಸ್ಮರಿಸುವ ದಿನ ಎಂದರು. ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ಹೋರಾಡಲು ಅವರು ಮಾಡಿದ ಪ್ರಯತ್ನಕ್ಕೆ ಇಂದು ಇಡೀ ದೇಶ ಗೌರವಿಸುತ್ತಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಎಸ್ ಸಿ ಮೂರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ್, ಮುಖಂಡರಾದ ಭೀಮಶಾ ಜಿರೋಳ್ಳಿ, ಶರಣಗೌಡ ಚಾಮನೂರ, ಅನಿಕೇತ ಚವ್ಹಾಣ, ರಾಜಶೇಖರ ಧೂಪದ್ ಸೇರಿದಂತೆ ಇತರರು ಇದ್ದರು.

