ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರರ ಜಯಂತಿ ಆಚರಣೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಬುಧವಾರ ಹನ್ನೆರಡನೆಯ ಶತಮಾನದ ಪ್ರಥಮ ಶ್ರೇಣಿಯ ವಚನಕಾರರಲ್ಲಿ ಒಬ್ಬರು, ಕಾಯಕಯೋಗಿ, ಶಿವಯೋಗಿ ಶ್ರೀ ಸಿದ್ದರಾಮೇಶ್ವರರ ಅವರ ಜಯಂತಿ ಆಚರಣೆ ಮಾಡಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ನಮನಗಳು ಸಲ್ಲಿಸಿದರು.
ಈ ಸಂಧರ್ಭದಲ್ಲಿ ಮುಖಂಡರಾದ ಸಂಜಯ ಬುಳಕರ್, ಸಂತೋಷ ಕಾಶಿ, ರವಿ ವಿಟ್ಕರ್, ವಿಠಲ್ ಕಟ್ಟಿಮನಿ, ವೆಂಕಟೇಶ್ ಇಂಗಳಗಿ, ಸುಭಾಷ್ ಪವಾರ, ಕರಣಕುಮಾರ್ ಅಲ್ಲೂರ, ಭೀಮಣ್ಣ ಕರದಳ್ಳಿ, ಚಂದ್ರು ಕಾಶಿ ಸೇರಿದಂತೆ ಭೋವಿ ವಡ್ಡರ ಸಮಾಜದ ಮುಖಂಡರು ಹಾಜರಿದ್ದರು.

