ಚಿತ್ತಾಪುರ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಅವರಿಗೆ ಕಂಬಳೇಶ್ವರ ಶ್ರೀಗಳು ಸನ್ಮಾನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಎಲ್ಡಿ) ಅಧ್ಯಕ್ಷರಾಗಿ ಆಯ್ಕೆಯಾದ ಭೀಮಣ್ಣ ಸಾಲಿ ಅವರು ಪಟ್ಟಣದ ಕಂಬಳೇಶ್ವರ ಶ್ರೀ ಸೋಮಶೇಖರ ಶಿವಾಚಾರ್ಯರಿಗೆ ಗೌರವಿಸಿ ಆಶೀರ್ವಾದ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಶ್ರೀಗಳು ನೂತನ ಅಧ್ಯಕ್ಷರಿಗೆ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಓಂಕಾರ ರೇಷ್ಮಿ, ಪ್ರಭು ಹಲಕರ್ಟಿ ಸೇರಿದಂತೆ ಇತರರು ಇದ್ದರು.

