ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ ಆರ್.ರುದ್ರಯ್ಯ ಆಯ್ಕೆ: ನರಿಬೋಳ ಹರ್ಷ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ ಕರ್ನಾಟಕ ಸರ್ಕಾರದ ನಿವೃತ್ತ ಕಾರ್ಯದರ್ಶಿ ಆರ್.ರುದ್ರಯ್ಯ ಅವರನ್ನು ಆಯ್ಕೆ ಮಾಡಿರುವುದು ಹರ್ಷವನ್ನುಂಟು ಮಾಡಿದೆ ಎಂದು ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ ತಿಳಿಸಿದ್ದಾರೆ.
ಆರ್.ರುದ್ರಯ್ಯ ಅವರು ಕಲಬುರಗಿ ನಗರದಿಂದ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ ಆಯ್ಕೆಯಾಗಿರುವುದು ಈ ಭಾಗದಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ಬಂದಂತಾಗಿದೆ. ಪಕ್ಷ ಇವರನ್ನು ಗುರುತಿಸಿ ಗುರುತರವಾದ ಜವಾಬ್ದಾರಿ ನೀಡಿದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಧನ್ಯವಾದಗಳು ತಿಳಿಸಿದ್ದಾರೆ.

