Oplus_0

ಚಿತ್ತಾಪುರ ಡಿಗ್ರಿ ಕಾಲೇಜಿನಲ್ಲಿ ಮಾ.6 ರಂದು ರಾಜ್ಯ ಮಟ್ಟದ ವಿಚಾರ ಸಂಕಿರಣ: ಬಿರಾದಾರ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಐಕ್ಯೂಎಸಿ ಉಪಕ್ರಮದಡಿ ರಾಜ್ಯ ಮಟ್ಟದ ಒಂದು ದಿನದ ವಿಚಾರ ಸಂಕಿರಣ (ವಿಷಯ: ಸಂಶೋಧನಾ ವಿಧಾನ ಮತ್ತು ಬೌದ್ಧಿಕ ಆಸ್ತಿ ಹಕ್ಕು) ಮಾ.6 ರಂದು ಬೆಳಗ್ಗೆ 10.30 ಕ್ಕೆ ಆಯೋಜಿಸಲಾಗಿದೆ ಎಂದು ಪ್ರಾಚಾರ್ಯ ಡಾ.ಶಿವಶರಣಪ್ಪ ಬಿರಾದಾರ ತಿಳಿಸಿದ್ದಾರೆ.

ವಿಶ್ವಗುರು ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಕರದಾಳ ಉದ್ಘಾಟಿಸುವರು, ಮುಖ್ಯ ಭಾಷಣಕಾರರಾಗಿ ಗುಲ್ಬರ್ಗ ವಿಶ್ವವಿದ್ಯಾಲಯದ ಗಣಿತ ವಿಭಾಗದ ಪ್ರಾಧ್ಯಾಪಕರು ಮತ್ತು ಅಧ್ಯಕ್ಷರಾದ ಡಾ. ಎನ್. ಬಿ. ನಡುವಿನಮನಿ, ಸಂಪನ್ಮೂಲ ವ್ಯಕ್ತಿಗಳಾಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಾನೂನು ವಿಭಾಗದ ಮುಖ್ಯಸ್ಥರಾದ ಡಾ. ಬಸವರಾಜ ಎಂ. ಕುಬಕಡ್ಡಿ, ಗುಲ್ಬರ್ಗ ವಿಶ್ವವಿದ್ಯಾಲಯ ವಾಣಿಜ್ಯ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ವಘಮರೆ ಶಿವಾಜಿ, ಐಕ್ಯೂಎಸಿ ಸಂಯೋಜಕ ಡಾ. ಕೈಲಾಸಪತಿ ಎಂ. ವಿಶ್ವಕರ್ಮ, ಪ್ರಾಚಾರ್ಯ ಡಾ. ಶಿವಶರಣಪ್ಪ ಬಿರಾದಾರ ಅಧ್ಯಕ್ಷತೆ ವಹಿಸುವರು.

ಸಮಾರೋಪ ಸಮಾರಂಭ ಮಧ್ಯಾಹ್ನ 3.30 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಖ್ಯಾತ ವೈದ್ಯ ಡಾ.ಚಂದ್ರಶೇಖರ್ ಕಾಂತಾ, ಸೇಡಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಬಿ.ಕೆ. ಪಂಡಿತ್, ಸಿಬ್ಬಂದಿ ಕಾರ್ಯದರ್ಶಿ ಶರಣಬಸಪ್ಪ ರೈಕೋಟಿ, ಐಕ್ಯೂಎಸಿ ಸಹ-ಸಂಯೋಜಕ ಡಾ. ಸಂಗಪ್ಪ ಮಾಮಶೆಟ್ಟಿ, ಐಕ್ಯೂಎಸಿ ಸಹ-ಸಂಯೋಜಕ ಡಾ. ಕೈಲಾಸಪತಿ ಎಂ. ವಿಶ್ವಕರ್ಮ, ಪ್ರಾಚಾರ್ಯ ಡಾ. ಶಿವಶರಣಪ್ಪ ಬಿರಾದಾರ ಅಧ್ಯಕ್ಷತೆ ವಹಿಸುವರು.

Spread the love

Leave a Reply

Your email address will not be published. Required fields are marked *

error: Content is protected !!