ರಾಜ್ಯ ಮಟ್ಟದ ವಿಚಾರ ಸಂಕಿರಣ, ನಿರಂತರ ಪ್ರಯತ್ನದಿಂದ ಗುರಿ ಮುಟ್ಟಲು ಸಾಧ್ಯ: ಪಾಟೀಲ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಶೈಕ್ಷಣಿಕ ಜೀವನದಲ್ಲಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನದಿಂದ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು ವಿಶ್ವಗುರು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಕರದಾಳ ಹೇಳಿದರು.
ಪಟ್ಟಣದ ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಐಕ್ಯೂಎಸಿ ಉಪಕ್ರಮದಡಿ ಗುರುವಾರ ಹಮ್ಮಿಕೊಂಡಿದ್ದ ಸಂಶೋಧನಾ ವಿಧಾನ ಮತ್ತು ಬೌದ್ಧಿಕ ಆಸ್ತಿ ಹಕ್ಕು ಕುರಿತು ರಾಜ್ಯ ಮಟ್ಟದ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ಕೋರ್ಸ್ ಆಯ್ಕೆ ಮಾಡುವಲ್ಲಿ ವಿದ್ಯಾರ್ಥಿಗಳು ಸ್ವತಂತ್ರರಾಗಿರಬೇಕು ಹೊರತು ಯಾರದೋ ಒತ್ತಡದಿಂದ ಅಭ್ಯಾಸ ಮಾಡಬಾರದು ಆಸಕ್ತಿ ಇರುವ ಕೋರ್ಸ್ ತೆಗೆದುಕೊಂಡರೆ ಯಶಸ್ಸಿನ ದಡ ತಲುಪಲು ಸಾಧ್ಯ ಎಂದು ಹೇಳಿದರು.
ಗ್ರಾಮೀಣ ಭಾಗದ ಪ್ರತಿಭಾವಂತರೇ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆಗೈದಿದ್ದಾರೆ, ಹೀಗಾಗಿ ನಾವುಗಳು ಹಳ್ಳಿಯಿಂದ ಬಂದವರು ಎಂಬ ಕೀಳರಿಮೆ ಬಿಟ್ಟು ಸಾಧನೆಗೈದವರನ್ನು ಆದರ್ಶವನ್ನು ಇಟ್ಟುಕೊಂಡು ಮುನ್ನುಗ್ಗಬೇಕು ಎಂದು ಕಿವಿಮಾತು ಹೇಳಿದರು.
ಮುಖ್ಯ ಭಾಷಣಕಾರರಾಗಿ ಗುಲ್ಬರ್ಗ ವಿಶ್ವವಿದ್ಯಾಲಯದ ಗಣಿತ ವಿಭಾಗದ ಪ್ರಾಧ್ಯಾಪಕರು ಮತ್ತು ಅಧ್ಯಕ್ಷರಾದ ಡಾ. ಎನ್. ಬಿ. ನಡುವಿನಮನಿ, ಸಂಪನ್ಮೂಲ ವ್ಯಕ್ತಿಗಳಾಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಾನೂನು ವಿಭಾಗದ ಮುಖ್ಯಸ್ಥರಾದ ಡಾ. ಬಸವರಾಜ ಎಂ. ಕುಬಕಡ್ಡಿ, ಗುಲ್ಬರ್ಗ ವಿಶ್ವವಿದ್ಯಾಲಯ ವಾಣಿಜ್ಯ ವಿಭಾಗದ ನಿವೃತ್ತಪ್ರಾಧ್ಯಾಪಕ ಡಾ. ವಘಮರೆ ಶಿವಾಜಿ, ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಶಿವಶರಣಪ್ಪ ಬಿರಾದಾರ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ಪ್ರೋ.ಶರಣಬಸಪ್ಪ ರೈಕೋಟಿ, ಡಾ.ಮಲ್ಲಿಕಾರ್ಜುನ ಬಿರಾದಾರ, ಡಾ. ಸಂಗಪ್ಪ ಮಾಮಶೆಟ್ಟಿ, ಡಾ.ಮಂಜುನಾಥ ದೇಶಪಾಂಡೆ, ಡಾ.ಸೂಗುರೇಶ್ವರ.ಆರ್, ಪ್ರೋ.ಅನೀಲಕುಮಾರ ಮಂಡೋಲಕರ್, ಡಾ.ಶಶಿಧರ ಯಡ್ರಾಮಿ, ಡಾ.ಫರಹಿನ್ ಫಾತೀಮಾ, ರೋಹಿಣಿ ಕಲ್ಮಠ, ಸಾವಿತ್ರಿ ದೇಸಾಯಿ, ಮಲ್ಲಪ್ಪ ತೊಟ್ನಳ್ಳಿ, ಲಕ್ಷ್ಮೀಪುತ್ರ ಪಾಸೋಡಿ, ಮರೇಪ್ಪ ಮೇತ್ರಿ, ಶ್ರೀನಾಥ್ ಬಟಗೀರಿ ಸೇರಿದಂತೆ ಅತಿಥಿ ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಐಕ್ಯೂಎಸಿ ಸಂಯೋಜಕ ಡಾ. ಕೈಲಾಸಪತಿ ಎಂ. ವಿಶ್ವಕರ್ಮ ಸ್ವಾಗತಿಸಿದರು. ಪ್ರೋ.ಮಲ್ಲಪ್ಪ ಮಾನೇಗಾರ್ ನಿರೂಪಿಸಿದರು.
ಮಧ್ಯಾಹ್ನ ನಡೆದ ಸಮಾರೋಪ ಸಮಾರಂಭ ಮುಖ್ಯ ಅತಿಥಿಗಳಾಗಿ ಖ್ಯಾತ ವೈದ್ಯ ಡಾ.ಚಂದ್ರಶೇಖರ್ ಕಾಂತಾ, ಸೇಡಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಬಿ.ಕೆ. ಪಂಡಿತ್, ಸಿಬ್ಬಂದಿ ಕಾರ್ಯದರ್ಶಿ ಶರಣಬಸಪ್ಪ ರೈಕೋಟಿ, ಐಕ್ಯೂಎಸಿ ಸಹ-ಸಂಯೋಜಕರಾದ ಡಾ. ಸಂಗಪ್ಪ ಮಾಮಶೆಟ್ಟಿ, ಡಾ. ಕೈಲಾಸಪತಿ ಎಂ. ವಿಶ್ವಕರ್ಮ, ಪ್ರಾಚಾರ್ಯ ಡಾ. ಶಿವಶರಣಪ್ಪ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು.