ಚಿತ್ತಾಪುರ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕಾರ ಪದಗ್ರಹಣ, ಪುರಸಭೆ ಸದಸ್ಯರ ಅಭಿಪ್ರಾಯದಂತೆ ಸೇವೆ ಸಲ್ಲಿಸುವೆ: ಅನ್ನಪೂರ್ಣ ಕಲ್ಲಕ್
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪುರಸಭೆಯ ನೂತನ ಅಧ್ಯಕ್ಷೆ ಅನ್ನಪೂರ್ಣ ನಾಗಪ್ಪ ಕಲ್ಲಕ್ ಹಾಗೂ ಉಪಾಧ್ಯಕ್ಷೆ ಅತೀಯಾ ಬೇಗಂ ನಜಿಮೋದ್ದಿನ್ ಅವರು ನಡಾವಳಿ ಪುಸ್ತಕದಲ್ಲಿ ಹಸ್ತಾಕ್ಷರ ಹಾಕುವ ಮೂಲಕ ಅಧಿಕಾರ ಪದಗ್ರಹಣ ಮಾಡಿದರು.
ಪುರಸಭೆ ಸಭಾಂಗಣದಲ್ಲಿ ಪುರಸಭೆ ಸದಸ್ಯರ ಹಾಗೂ ಅಧಿಕಾರಿ ಸಿಬ್ಬಂದಿಗಳ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರ ಸಮ್ಮುಖದಲ್ಲಿ ಮಂಗಳವಾರ ನೂತನ ಅಧ್ಯಕ್ಷ-ಉಪಾಧ್ಯಕ್ಷರು ಅಧಿಕಾರ ವಹಿಸಿಕೊಂಡರು. ಈ ವೇಳೆ ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ ಅವರು ಅಧ್ಯಕ್ಷ-ಉಪಾಧ್ಯಕ್ಷರಿಗೆ ಹೂಗುಚ್ಛ ನೀಡಿ ಶುಭಾಶಯಗಳು ಕೋರಿದರು
ಈ ವೇಳೆ ಅಧಿಕಾರಿ ವಹಿಸಿಕೊಂಡ ನೂತನ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್ ಮಾತನಾಡಿ, ಪುರಸಭೆಯ ಎಲ್ಲಾ ಸದಸ್ಯರ ಅಭಿಪ್ರಾಯದ ಪ್ರಕಾರ ಚಿತ್ತಾಪುರ ಪಟ್ಟಣದ ಅಭಿವೃದ್ಧಿ ಸೇರಿದಂತೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಲಾಗುವುದು ಎಂದು ಹೇಳಿದರು.
ನಮ್ಮನ್ನು ಆಯ್ಕೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಪುರಸಭೆಯ ಕಾಂಗ್ರೆಸ್ ಪಕ್ಷದ ಸದಸ್ಯರಿಗೂ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರಿಗೂ ಕೃತಜ್ಞತೆಗಳು ಸಲ್ಲಿಸಿದರು. ಉಪಾಧ್ಯಕ್ಷೆ ಅತೀಯಾ ಬೇಗಂ ನಜಿಮೋದ್ದಿನ್ ಅವರು ಸಹ ಎಲ್ಲರಿಗೂ ಕೃತಜ್ಞತೆಗಳು ಸಲ್ಲಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಕಾಶಿ, ಮಲ್ಲಿಕಾರ್ಜುನ ಕಾಳಗಿ, ಶೀಲಾ ಕಾಶಿ, ಪಾಶಾಮಿಯ್ಯಾ ಖುರೇಷಿ, ಶಿವಕಾಂತ್ ಬೆಣ್ಣೂರಕರ್, ವಿರೋಧ ಪಕ್ಷದ ನಾಯಕ ನಾಗರಾಜ ಭಂಕಲಗಿ, ಸದಸ್ಯರಾದ ಶ್ರೀನಿವಾಸ ರೆಡ್ಡಿ ಪಾಲಪ್, ಶಿವರಾಜ್ ಪಾಳೇದ್, ಪ್ರಭು ಗಂಗಾಣಿ, ಸಂತೋಷ ಚೌದರಿ, ಮುಖಂಡರಾದ ಬಸಣ್ಣ ತಳವಾರ, ಅಹ್ಮದ್ ಸೇಟ್, ನಾಗು ಕಲ್ಲಕ್, ಅಣ್ಣಾರಾವ್ ಸಣ್ಣೂರಕರ್, ಮಹ್ಮದ್ ಯಕ್ಬಾಲ್, ನಜೀರ್ ಆಡಕಿ, ಶಾಮ್ ಮುಕ್ತೇದಾರ, ಸಂಜಯ ಬುಳಕರ್, ಮಲ್ಲಿಕಾರ್ಜುನ ಮುಡಬೂಳಕರ್, ಮಲ್ಲಿಕಾರ್ಜುನ ಬೊಮ್ಮನಳ್ಳಿ, ಶ್ರೀಕಾಂತ್ ಹೊಸ್ಸಳ್ಳಿ, ಮಹಾಂತೇಶ್ ಬೊಮ್ಮನಳ್ಳಿ, ಜಗನ್ನಾಥ ಮುಡಬೂಳಕರ್, ವಿಶ್ವನಾಥ ಬೀದಿಮನಿ, ರವಿ ಗೊಬ್ಬರ, ಭೀಮಾಶಂಕರ ಹೋಳಿಕಟ್ಟಿ, ನಾಗರಾಜ್ ರೆಡ್ಡಿ, ಪುರಸಭೆ ಸಿಬ್ಬಂದಿಗಳಾದ ಮುತ್ತಣ್ಣ ಭಂಡಾರಿ, ಕ್ರಾಂತಿದೇವಿ, ರವಿಶಂಕರ ಸೇರಿದಂತೆ ಪುರಸಭೆ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಾಬಣ್ಣ ಎಸ್ ಸ್ವಾಗತಿಸಿದರು.