ಚಿತ್ತಾಪುರ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜಗದೀಶ್ ಚವ್ಹಾಣ ಆಯ್ಕೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜಗದೀಶ್ ಚವ್ಹಾಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಘೋಷಣೆ ಮಾಡಿದ್ದಾರೆ.
ಪುರಸಭೆ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶೇಷ ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಿತು. ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಜಗದೀಶ್ ಚವ್ಹಾಣ ಆಕಾಂಕ್ಷಿಯಾಗಿದ್ದರು ಹೀಗಾಗಿ ಎಲ್ಲರೂ ಕೈ ಎತ್ತುವ ಮೂಲಕ ಅವಿರೋಧವಾಗಿ ಆಯ್ಕೆಯಾದರು ಉಳಿದಂತೆ ಸದಸ್ಯರಾಗಿ ಸುಮಂಗಲಾ ಸಣ್ಣೂರಕರ್, ಬೇಬಿ ಸುಭಾಷ್ ಜಾಧವ, ಶಹನಾಜ್ ಬೇಗಂ ಮಹ್ಮದ್ ಯಕ್ಬಾಲ್, ಪ್ರಭು ಗಂಗಾಣಿ ಅವರು ಆಯ್ಕೆಯಾಗಿದ್ದಾರೆ.
ನಂತರ ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಸ್ಥಾಯಿ ಸಮಿತಿ ನೂತನ ಅಧ್ಯಕ್ಷ ಹಾಗೂ ಸದಸ್ಯರಿಗೆ ಸನ್ಮಾನಿಸಿ ಗೌರವಿಸಿದರು.
ಪುರಸಭೆ ಸದಸ್ಯರಾದ ಚಂದ್ರಶೇಖರ ಕಾಶಿ, ನಾಗರಾಜ ಭಂಕಲಗಿ, ವಿನೋದ ಗುತ್ತೇದಾರ, ಶ್ರೀನಿವಾಸರೆಡ್ಡಿ ಪಾಲಪ್, ಸಂತೋಷ ಚೌದರಿ, ಮುಖಂಡರಾದ ರವಿ ರಾಠೋಡ, ನೀಲಕಂಠ ಪವಾರ, ಶಂಕರ ಚೋಕ್ಲಾ, ಶಿವರಾಮ ಚವ್ಹಾಣ, ಜಗದೀಶ್ ಪವಾರ, ವಿನೋದ ರಾಠೋಡ ಸೇರಿದಂತೆ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.