ಚಿತ್ತಾಪುರ ರಿಯಾಯಿತಿ ಧರದಲ್ಲಿ ಬಿತ್ತನೆ ಬೀಜ ವಿತರಣೆಗೆ: ಗೋಪಸೇನ್ ಚಾಲನೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರಿಗೆ ರಿಯಾಯಿತಿ ಧರದಲ್ಲಿ ಬಿತ್ತನೆ ಬೀಜ ವಿತರಣೆಗೆ ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್ ಚಾಲನೆ ನೀಡಿದರು.
ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ರವೀಂದ್ರ ಕುಮಾರ ಮಾತನಾಡಿ, ಬಿತ್ತನೆ ಬಿಜಗಳಾದ ಹೆಸರು, ಉದ್ದು, ತೊಗರಿ, ಬೀಜ ರಿಯಾಯಿತಿ ದರದಲ್ಲಿ ಲಭ್ಯವಿದ್ದು. ನಮ್ಮ ರೈತ ಸಂಪರ್ಕ ಕೆಂದ್ರ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮದ ರೈತರು ಸದುಪಯೋಗ ಪಡೆದುಕೊಳ್ಳಬೇಕು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಸತ್ಯನಾರಾಯಣ, ಬಾಬು ಕಾಶಿ, ಶ್ರೀಮಂತ ಜೀವಣಗಿ, ಕೃಷಿ ಅಧಿಕಾರಿ ಬಸವರಾಜ ಬಂಗರಗಿ, ಲೆಕ್ಕ ಸಹಾಯಕ ರಾಮರಾವ್ ರಾಠೋಡ್, ಬಿ.ಟಿ.ಎಂ, ಸಚಿನ್ ಕುಮಾರ ಸೇರಿದಂತೆ ಸಿಬ್ಬಂಧಿಗಳು ಇದ್ದರು.