ಚಿತ್ತಾಪುರ ಸೇವಾಲಾಲ್ ಮಹಾರಾಜರ ಪಲ್ಲಕ್ಕಿ ಉತ್ಸವಕ್ಕೆ ಕಂಬಳೇಶ್ವರ ಶ್ರೀ ಚಾಲನೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಸ್ಟೇಷನ್ ತಾಂಡಾದಲ್ಲಿ ಸೇವಾಲಾಲ್ ಮಹಾರಾಜರ ಪಲ್ಲಕ್ಕಿ ಉತ್ಸವಕ್ಕೆ ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ಚಾಲನೆ ನೀಡಿದರು. ತುಕಾರಾಮ ಖೀರು ನಾಯಕ ಅವರ ಮನೆಯಿಂದ ಸೇವಾಲಾಲ್ ಮಹಾರಾಜರ ಪಲ್ಲಕ್ಕಿ ಉತ್ಸವ ಪ್ರಾರಂಭಗೊಂಡು ತಾಂಡಾದ ಎಲ್ಲ ಬೀದಿಗಳಲ್ಲಿ ಪಲ್ಲಕ್ಕಿಯ ಮೆರವಣಿಗೆ ನಡೆಯಿತು.
ಈ ಸಂದರ್ಭದಲ್ಲಿ ತಾಂಡಾದ ನಾಯಕರಾದ ತುಕಾರಾಮ ಖೀರು ನಾಯಕ, ಕನ್ನು ಯಂಕು ನಾಯಕ, ಚಂದ್ರಾಮ ಚವ್ಹಾಣ, ಡಾವ ಕಿಶನ, ಕಿಶನ ಕಾರಭಾರಿ, ಸರಪಂಚ ಭೋಜು ಪವಾರ, ಕಾಂತು ಚವ್ಹಾಣ, ಲಕ್ಷಣ ಪಾಂಡು, ಅನಿಲ, ಶಂಕರ, ನಾಗರಾಜ, ವಿಠ್ಠಲ ರಾಠೋಡ, ಖುಬ್ಬು ರಾಠೋಡ, ವಿಕಾಸ ಪವಾರ, ಸುರೇಶ ರೂಪಲಾ, ರಮೇಶ್ ನಾಗು, ರವಿ ಹೀರು, ಆಕಾಶ ನಿಲು ಚವ್ಹಾಣ, ಖುಬ್ಬು ಚವ್ಹಾಣ, ಶಿವರಾಮ ಚವ್ಹಾಣ, ಅಶ್ವಥ ರಾಠೋಡ ಸೇರಿದಂತೆ ತಾಂಡಾದ ತಾಯಂದಿರು ಹಲವಾರು ಗಣ್ಯಮಾನ್ಯರು ಇದ್ದರು.