ಚಿತ್ತಾಪುರ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಚುನಾವಣೆ | ಬಿಜೆಪಿ ಅಭ್ಯರ್ಥಿ ಅಶೋಕ ಹರನಾಳ ನಾಮಪತ್ರ ಸಲ್ಲಿಕೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ಮಾರ್ಚ್ 8 ರಂದು ನಡೆಯಲಿರುವ ಚುನಾವಣೆಯ ಪರಿಶಿಷ್ಟ ಜಾತಿ ವರ್ಗದ ಮೀಸಲಾತಿಯಡಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಅಶೋಕ ಹರನಾಳ ಅವರು ಶನಿವಾರ ಮುಖ್ಯ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ವಾಡಿ ಅಧ್ಯಕ್ಷ ವೀರಣ್ಣ ಯಾರಿ, ಜಿಲ್ಲಾ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುರೇಶ ರಾಠೋಡ, ಸೂಚಕರಾದ ರಾಜಶೇಖರ ಮುಡಬೂಳ ಇದ್ದರು.

