ವಿಶ್ವ ಪರಿಸರ ದಿನಾಚರಣೆ, ಶುದ್ಧ ಪರಿಸರ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ: ಗುರಿಕಾರ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಆರೋಗ್ಯಯುತ ಸಮಾಜ ನಿರ್ಮಾಣವಾಗಬೇಕಾದರೆ ಸ್ವಚ್ಛ ಹಾಗೂ ಶುದ್ಧ ಪರಿಸರ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಅಭಿಪ್ರಾಯಪಟ್ಟರು.
ಪಟ್ಟಣದ ಪುರಸಭೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಗುರುವಾರ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಿಸರ ಸ್ವಚ್ಛತೆ ಇರಬೇಕಾದರೆ ಎಲ್ಲರೂ ಸಸಿಗಳನ್ನು ನೆಟ್ಟು ಬೆಳೆಸಿ ಪೋಷಿಸುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ನಾಗಪ್ಪ ಕಲ್ಲಕ್ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪರಿಸರ ಅಭಿಯಂತರರು ಸುನಿಲ್ ಕುಮಾರ್, ಕಂದಾಯ ಅಧಿಕಾರಿ ಶರಣಪ್ಪ, ಆರೋಗ್ಯ ನಿರೀಕ್ಷಕ ಶರಣುಕುಮಾರ್, ಕಚೇರಿ ವ್ಯವಸ್ಥಾಪಕಿ ಶಬನಾ ಬೇಗಂ ಸೇರಿದಂತೆ ಸ್ತ್ರೀ ಶಕ್ತಿ ಎಸ್’ಜಿಎಚ್ ಮಹಿಳಾ ಸಂಘದ ಸದಸ್ಯರು ಉಪಸ್ಥಿತರಿದ್ದರು.