Oplus_0

ಚಿತ್ತಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಹಳಿಸಿ ಹೋದ ಬಿಜೆಪಿ ಕಾಂಗ್ರೆಸ್ ಮೈತ್ರಿ, ಜೆಡಿಎಸ್ ಅಧ್ಯಕ್ಷ ಮಂಜುನಾಥ ಪೊಲೀಸ್ ಪಾಟೀಲ ವ್ಯಂಗ್ಯ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ  ಮುಂದಿನ ಐದು ವರ್ಷಗಳ ಅವಧಿಗಾಗಿ ನಡೆದಿರುವ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ವಿಶ್ವರಾಜ್ ನೆನೆಕ್ಕಿ ಹಾಗೂ ಕಾಂಗ್ರೆಸ್ ಬೆಂಬಲಿತ ಉಪಾಧ್ಯಕ್ಷರಾಗಿ ಅರ್ಜುನ್ ಸಾಲಹಳ್ಳಿ ಅವರು ಆಯ್ಕೆಯಾಗಿದ್ದರು ಆದರೆ ಒಂದೇ ಒಂದು ದಿನ ಅಧಿಕಾರದ ಕುರ್ಚಿಯಲ್ಲಿ ಕುಳಿತುಕೊಳ್ಳಲಿಲ್ಲ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಮಂಜುನಾಥ ಪೊಲೀಸ್ ಪಾಟೀಲ ವ್ಯಂಗ್ಯವಾಡಿದ್ದಾರೆ.

ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡು ಗೆಲುವನ್ನು ಸಾಧಿಸಿದ್ದರು ಆದರೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮೈತ್ರಿ ಇದೆ ಆದರೆ ತಾಲೂಕಿನಲ್ಲಿ ಬಿಜೆಪಿ ಅಧ್ಯಕ್ಷರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯನ್ನು ಮೈತ್ರಿ ಮಾಡಿಕೊಂಡು ಅಧಿಕಾರದ ಚುಕ್ಕಾಣಿಯನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಅಧ್ಯಕ್ಷ ಸ್ಥಾನ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು. ಈ ಮೈತ್ರಿ ಒಂದು ದಿನ ಕೂಡ ಅಧಿಕಾರವನ್ನು ನೋಡಲಿಲ್ಲ ಮೈತ್ರಿ ಹಳಿಸಿ ಹೋಯ್ತು ಎಂದು ಟೀಕಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!