ಚಿತ್ತಾಪುರದಲ್ಲಿ ಎಚ್ಐವಿ ಸೋಂಕು ಹರಡುವಿಕೆ ಮತ್ತು ನಿಯಂತ್ರಣಕ್ಕೆ ಎನ್ಎಸ್ಎಸ್ ವತಿಯಿಂದ ಜಾಥಾ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ಅಡಿಯಲ್ಲಿ ಎಚ್ಐವಿ ಸೋಂಕು ಹರಡುವಿಕೆ ಮತ್ತು ನಿಯಂತ್ರಣ ಕುರಿತು ಮಕ್ಕಳಲ್ಲಿ ಹಾಗೂ ಸಮಾಜದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಇವರ ಸಹಯೋಗದಲ್ಲಿ ಜಾಥಾವನ್ನು ಹಮ್ಮಿಕೊಳ್ಳಲಾಯಿತು.
ಈ ಜಾಥಾದಲ್ಲಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಮತ್ತು ತಾಲೂಕು ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಭಾಗವಹಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು ಎಂದು ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಡಾ. ಸಂಗಪ್ಪ ಮಾಮನಶೆಟ್ಟಿ ತಿಳಿಸಿದ್ದಾರೆ.

