Oplus_131072

ಡೇವಿಡ್ ಸಿಮಿಯಾನ್ ನಿಧನಕ್ಕೆ ಬಾಬುರಾವ್ ಚಿಂಚನಸೂರ ತೀವ್ರ ಸಂತಾಪ

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ವಿಧಾನ ಪರಿಷತ್ ಮಾಜಿ ಸಭಾಪತಿ ಡೇವಿಡ್ ಸಿಮಿಯಾನ್ ಅವರ ಅಗಲಿಕೆಯಿಂದ ತೀವ್ರ ದುಃಖಿತನಾಗಿದ್ದೇನೆ ಎಂದು ಮಾಜಿ ಸಚಿವ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನ ಸಭಾಪತಿಗಳಾಗಿ ಸೇವೆ ಸಲ್ಲಿಸಿದ ಡೇವಿಡ್ ಅವರ ನಿಧನದಿಂದ ನಮ್ಮ ಕಲ್ಯಾಣ ಕರ್ನಾಟಕವು ಜನಪರ ಕಾಳಜಿಯ ಹಿರಿಯ ನಾಯಕರೊಬ್ಬರನ್ನು ಕಳೆದುಕೊಂಡಂತಾಗಿದೆ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಏಳಿಗೆಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಅವರ ಕೊಡುಗೆಗಳನ್ನು ಕಲ್ಯಾಣ ಕರ್ನಾಟಕವು ಸ್ಮರಿಸುತ್ತದೆ ಎಂದು ತಿಳಿಸಿದ್ದಾರೆ.

ಅವರೊಂದಿಗಿನ ಒಡನಾಟದಿಂದ ನನ್ನ ಕಲಿಕೆ ಅಪಾರ, ಸಜ್ಜನಿಕೆಯ ಹಾಗೂ ಪ್ರೇರಣಾದಾಯಕ ವ್ಯಕ್ತಿತ್ವದ ಶ್ರೀಯುತರನ್ನು ಕಳೆದುಕೊಂಡಿದ್ದು ಬಹುದೊಡ್ಡ ನಷ್ಟ ಎಂದೇ ಭಾವಿಸುತ್ತೇನೆ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ, ಈ ದುಃಖದ ಸಮಯದಲ್ಲಿ ಅವರ ಕುಟುಂಬ ವರ್ಗದವರು ಮತ್ತು ಹಿತೈಷಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಲಭಿಸಲಿ ಎಂದು ಆಶಿಸುತ್ತೇನೆ.

Spread the love

Leave a Reply

Your email address will not be published. Required fields are marked *

error: Content is protected !!