Oplus_0

ರಾವೂರ ಲಿo. ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ 5 ನೇ ಪುಣ್ಯ ಸ್ಮರಣೆ ನಿಮಿತ್ತ ಫೆ.12 ರಂದು ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ರಾವೂರ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ 12ನೇ ಪೀಠಾಧಿಪತಿ ತ್ರಿವಿಧ ದಾಸೋಹಿಗಳಾಗಿದ್ದ ಲಿಂಗೈಕ್ಯ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಐದನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಕಾರ್ಯದರ್ಶಿ ಡಾ. ಗುಂಡಣ್ಣ ಬಾಳಿ ತಿಳಿಸಿದ್ದಾರೆ.

ಪ್ರಸ್ತುತ ಪೀಠಾಧಿಪತಿ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿದ್ಯದಲ್ಲಿ ಫೆ.12 ರಂದು ಬುಧವಾರ ಬೆಳಿಗ್ಗೆ 9 ಗಂಟೆಗೆ ಲಿಂಗೈಕ್ಯ ಪೂಜ್ಯರ ಗದ್ದುಗೆಗೆ ವಿಶೇಷ ಪೂಜೆ ನಡೆಯುವುದು. ನಂತರ ಎನ್.ಜಿ.ಎನ್ ಫೌಂಡೇಶನ್ ಸಹಯೋಗದಲ್ಲಿ ಖ್ಯಾತ ವೈದ್ಯರಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಎಲುಬು, ಕೀಲು, ಹಲ್ಲು, ಬಿಪಿ, ಶುಗರ್, ಹೃದಯ ಸಂಬಂದಿ ಖಾಯಿಲೆಗಳಿಗೆ ಸೂಕ್ತ ತಪಾಸಣೆ ಮಾಡಿ ಚಿಕಿತ್ಸೆ ನೀಡುವರು. ಉಚಿತ ಬೊನ್ ಸ್ಕ್ಯಾನ್ ಕೂಡ ಮಾಡಲಾಗುತ್ತದೆ ಹಾಗೆಯೇ ಉಚಿತ ಔಷದಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಅದೇ ರೀತಿ ಜಿಮ್ಸ್ ಆಸ್ಪತ್ರೆಯ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ಬಂದ ಭಕ್ತದಿಗಳಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿದೆ. ರಾತ್ರಿ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದರು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಳ್ಳಲು ಡಾ. ಬಾಳಿ ವಿನಂತಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!