Oplus_131072

ಹಲಕಟ್ಟಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಈರಣ್ಣ ಇಸಬಾ ಉಪಾಧ್ಯಕ್ಷರಾಗಿ ಶರಣು ಬೊಮ್ಮನಳ್ಳಿ ಅವಿರೋಧ ಆಯ್ಕೆ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ತಾಲೂಕಿನ ಹಲಕಟ್ಟಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಬ್ಯಾಂಕಿನ ಅಧ್ಯಕ್ಷರಾಗಿ ಈರಣ್ಣ ಇಸಬಾ ಮತ್ತು ಉಪಾಧ್ಯಕ್ಷರಾಗಿ ಶರಣು ಬೊಮ್ಮನಳ್ಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಚೇತನ್ ತಿಳಿಸಿದ್ದಾರೆ.

ನೂತನ ಅಧ್ಯಕ್ಷ ಈರಣ್ಣ ಇಸಬಾ ಮಾತನಾಡಿ, ಸರ್ಕಾರದ ವತಿಯಿಂದ ಸಿಗುವ ಸೌಲಭ್ಯಗಳನ್ನು ರೈತರಿಗೆ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು. ಸಂಘದ ಅಭಿವೃದ್ಧಿಗೆ ಶ್ರಮ ವಹಿಸುತ್ತೇನೆ ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಮುದ್ ಸಾಹೇಬ್, ಪ್ರಮುಖರಾದ ಜಗದೀಶ್ ಸಿಂಧೆ, ಇಬ್ರಾಹಿಂ ಪಟೇಲ್, ದೇವೆಗೌಡ ಬಳವಡಿಗಿ, ರಾಜುಗೌಡ ಪೋಲೀಸ್ ಪಾಟೀಲ್, ಸೂರ್ಯಕಾಂತ ರದ್ದೇವಾಡಿ, ಶೀವಣ್ಣ ಹಿಟ್ಟಿನ್ , ನಾಗಣ್ಣ ಮುಗುಟಿ ಸೇರಿದಂತೆ ನಿರ್ದೇಶಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ನಂತರ ಕಾಂಗ್ರೆಸ್ ಬೆಂಬಲಿತ ಮುಖಂಡರು, ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

Spread the love

Leave a Reply

Your email address will not be published. Required fields are marked *

error: Content is protected !!