Oplus_131072

ಐಪಿಎಲ್ 18 ನೇ ಆವೃತ್ತಿಯ ಟ್ರೋಫಿ ಆರ್’ಸಿಬಿ ತಂಡ ಗೆಲ್ಲಲಿದೆ: ಅಂಬಾರಾಯ ಅಷ್ಠಗಿ ವಿಶ್ವಾಸ

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ಐಪಿಎಲ್ ನ 18 ನೇ ಆವೃತ್ತಿಯ ಎಲ್ಲಾ ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ಅಹಮದಾಬಾದ್‌, ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಇಲೆವೆನ್ ತಂಡಗಳ ನಡುವಿನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ಗೆಲುವು ಸಾಧಿಸಿ ಟ್ರೋಫಿ ಎತ್ತಿ ಹಿಡಿಯಲಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಡಾ. ಅಂಬಾರಾಯ ಅಷ್ಠಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವ ಅವರು, ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂದ್ಯಾವಳಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ತೋರಿದ್ದು, ಫೈನಲ್ ಪಂದ್ಯದಲ್ಲಿಯೂ ಸಹ ಭರ್ಜರಿಯಾಗಿ ಆಟವಾಡುವ ಮೂಲಕ ಗೆಲುವು ಸಾಧಿಸಿ ಕನ್ನಡಿಗರ ಕನಸು ನನಸು ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟೀದಾ‌ರ್ ನೇತೃತ್ವದಲ್ಲಿ ತಂಡದಲ್ಲಿ ವಿರಾಟ್ ಕೋಹ್ಲಿ, ವಿನಯಕುಮಾರ್, ಜೀತೇಶ ಶರ್ಮಾ, ಫಿಲ್ ಸಾಲ್ಟ್ ಸೇರಿದಂತೆ ಇತರೆ ಆಟಗಾರರು ಭರ್ಜರಿ ಬ್ಯಾಟಿಂಗ್‌ ಹಾಗೂ ಬೌಲಿಂಗ್ ಮಾಡುವ ವಿಶ್ವಾಸವಿದ್ದು, ಬೆಂಗಳೂರು ತಂಡ ಈ ಬಾರಿ ಫೈನಲ್ ಪಂದ್ಯ ಗೆಲ್ಲುವ ಮೂಲಕ ರಾಜ್ಯದ ಕೀರ್ತಿ ಹೆಚ್ಚಿಸಲಿದೆ ಎಂದು ಡಾ.ಅಂಬಾರಾಯ ಅಷ್ಠಗಿ ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!