Oplus_131072

ವಿಧಾನ ಪರಿಷತ್ ಮಾಜಿ ಸಭಾಪತಿ ಡೇವಿಡ್ ಸಿಮಿಯಾನ್ ನಿಧನದ ಪ್ರಯುಕ್ತ ನಾಳೆ ಡಿಸಿಸಿ ಕಚೇರಿಯಲ್ಲಿ ಸಂತಾಪ 

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್ ಸಿಮಿಯಾನ್ ರವರು ಅನಾರೋಗ್ಯದಿಂದ ಮಂಗಳವಾರ ನಿಧನರಾದ ಪ್ರಯುಕ್ತ ಜೂನ್ 11 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸಂತಾಪ ಸಭೆ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ ತಿಳಿಸಿದ್ದಾರೆ.

ಕಾರಣ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಚುನಾಯಿತ ಪ್ರತಿನಿಧಿಗಳು, ಮಹಿಳೆಯರು, ಯುವಕರು ಹಾಗೂ ಡೇವಿಡ್ ಸಿಮಿಯಾನ್ ರವರ ಅಭಿಮಾನಿ ಬಳಗದವರು ಈ ಸಂತಾಪದಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!