ಕಲಬುರಗಿ: ಮೇ.31ರ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲು ಎಂಎಲ್ಸಿ ಜಗದೇವ ಗುತ್ತೇದಾರ ಮನವಿ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಇವರು ಕೀಳು ಹಂತದ ಪದ ಬಳಸಿದ್ದನ್ನು ಖಂಡಿಸಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ ಅವಹೇಳನಕಾರಿಯಾಗಿ ಜಾತಿ ಬಳಸಿಕೊಂಡು ಕೋಮುವಾದಿ ಭಾಷಣ ಮಾಡಿದ್ದನ್ನು ಖಂಡಿಸಿ ಕಲಬುರಗಿ ನಾಗರೀಕ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಮೇ.31 ರಂದು ಬೆಳಿಗ್ಗೆ 11 ಗಂಟೆಗೆ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ ತಿಳಿಸಿದ್ದಾರೆ.
ಪ್ರಯುಕ್ತ ಈ ಬೃಹತ್ ಪ್ರತಿಭಟನೆಗೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಚುನಾಯಿತ ಪ್ರತಿನಿಧಿಗಳು, ಮಹಿಳೆಯರು, ಯುವಕರು, ಕಾಂಗ್ರೆಸ್ ಪಕ್ಷದ ಸಮಸ್ತ ಅಭಿಮಾನಿಗಳು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೃಹತ್ ಪ್ರತಿಭಟನೆಗೆ ಬೆಂಬಲಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.