Oplus_0

ಕೇಂದ್ರ ಬಜೆಟ್ ಐತಿಹಾಸಿಕ: ಬೆಣ್ಣೂರಕರ್ ಶ್ಲಾಘನೀಯ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: 2026ರ ಕೇಂದ್ರ ಬಜೆಟ್ “ವಿಕಸಿತ ಭಾರತ”ದ ದೃಷ್ಟಿಕೋನ ಹೊಂದಿರುವ, ಜನಸಾಮಾನ್ಯರು, ರೈತರು, ಯುವಕರು ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸುವ ಐತಿಹಾಸಿಕ ಬಜೆಟ್ ಆಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರಕರ್ ಶ್ಲಾಘಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಈ ಬಜೆಟ್, ಮೂಲಸೌಕರ್ಯ, ಆರೋಗ್ಯ, ಮತ್ತು ಎಐ (AI) ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಠ ಭಾರತದ ನಿರ್ಮಾಣಕ್ಕೆ ಬುನಾದಿ ಹಾಕಿದೆ ಎಂದು ಬಣ್ಣಿಸಿದ್ದಾರೆ.

ನಿರ್ಮಲಾ ಸೀತಾರಾಮನ್ ಸತತ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ದೇಶದ ಮೊದಲ ಮಹಿಳಾ ಹಣಕಾಸು ಸಚಿವೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!