ಕೇಂದ್ರ ಬಜೆಟ್ ಐತಿಹಾಸಿಕ: ಬೆಣ್ಣೂರಕರ್ ಶ್ಲಾಘನೀಯ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: 2026ರ ಕೇಂದ್ರ ಬಜೆಟ್ “ವಿಕಸಿತ ಭಾರತ”ದ ದೃಷ್ಟಿಕೋನ ಹೊಂದಿರುವ, ಜನಸಾಮಾನ್ಯರು, ರೈತರು, ಯುವಕರು ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸುವ ಐತಿಹಾಸಿಕ ಬಜೆಟ್ ಆಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರಕರ್ ಶ್ಲಾಘಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಈ ಬಜೆಟ್, ಮೂಲಸೌಕರ್ಯ, ಆರೋಗ್ಯ, ಮತ್ತು ಎಐ (AI) ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಠ ಭಾರತದ ನಿರ್ಮಾಣಕ್ಕೆ ಬುನಾದಿ ಹಾಕಿದೆ ಎಂದು ಬಣ್ಣಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಸತತ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ದೇಶದ ಮೊದಲ ಮಹಿಳಾ ಹಣಕಾಸು ಸಚಿವೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

