ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಹುಟ್ಟುಹಬ್ಬ, ಬಿಜೆಪಿ ಮುಖಂಡರಿಂದ ಗೌರವ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ನಗರದ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ್ ಭವನದಲ್ಲಿ ಮಾಜಿ ಕೇಂದ್ರ ಸಚಿವ ಆನೇಕಲ್ ನಾರಾಯಣಸ್ವಾಮಿ ಅವರನ್ನು ಬಿಜೆಪಿ ಮುಖಂಡರು ಹುಟ್ಟು ಹಬ್ಬದ ಶುಭಾಶಯಗಳು ತಿಳಿಸಿ ಗೌರವ ಸನ್ಮಾನವನ್ನು ಮಾಡಿದರು.
ಈ ಸಂದರ್ಭದಲ್ಲಿ ಕನಕಗಿರಿ ಕ್ಷೇತ್ರದ ಮಾಜಿ ಶಾಸಕ ಬಸವರಾಜ್ ದಡೆಸುಗುರ್, ಅಲೆಮಾರಿ ಅರೆ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ದೇವೇಂದ್ರನಾಥ್ ನಾದ್ ಮಾಜಿ ಸಪಾಯಿ ಕರ್ಮಚಾರಿ ನಿಗಮದ ಅಧ್ಯಕ್ಷ ಹನುಮಂತಪ್ಪ ಬಳ್ಳಾರಿ, ಬಿಜೆಪಿ ರಾಜ್ಯ ವಕ್ತಾರ ವೆಂಕಟೇಶ್ ದೊಡ್ಡೇರಿ, ರಾಯಚೂರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಂದ್ರ ಜಲ್ದಾರ್, ಬಾಗಲಕೋಟ ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮುತ್ತಣ್ಣ ಬೆನ್ನೂರು, ಬಿಜೆಪಿ ಕಲಬುರಗಿ ಜಿಲ್ಲಾ ಎಸ್.ಸಿ ಮೋರ್ಚಾ ಮಾಜಿ ಅಧ್ಯಕ್ಷ ವಿಜಯಕುಮಾರ್ ಅಡಕಿ, ಕಲಬುರಗಿ ಬಿಜೆಪಿ ಮುಖಂಡ ರಾಜು ಹದನೂರ್, ಯಾದಗಿರಿ ಜಿಲ್ಲೆ ಯುವ ಮುಖಂಡರಾದ ಸುರೇಶ್ ಕೋರಿ ಮುಂತಾದವರು ಸನ್ಮಾನ ಮಾಡಿ ಹೂ ಗುಚ್ಛ ನೀಡಿದರು.

