ಲಾಡ್ಲಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕೋಣೆಗಳ, ಶಿಕ್ಷಕರ ಕೊರತೆ ನೀಗಿಸಲು ನಮ್ಮ ಕರ್ನಾಟಕ ಸೇನೆ ಆಗ್ರಹ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಲಾಡ್ಲಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೆಚ್ಚುವರಿ ಕೋಣೆಗಳು ನಿರ್ಮಾಣ ಮಾಡಬೇಕು ಹಾಗೂ ಶಿಕ್ಷಕರ ಕೊರತೆಯನ್ನು ನೀಗಿಸಬೇಕು ಎಂದು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ಸಂಘಟನೆ ತಾಲೂಕು ಅಧ್ಯಕ್ಷ ಸುನೀಲ್ ಗುತ್ತೇದಾರ ನೇತೃತ್ವದಲ್ಲಿ ಮುಖಂಡರು ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಅಧಿಕವಾಗಿದ್ದು, ಶಿಕ್ಷಕರ ಸಂಖ್ಯೆ ಕಡಿಮೆ ಇದೆ ಮತ್ತು ಒಂದು ಕೋಣೆಯಲ್ಲಿ ಸುಮಾರು 70 ರಿಂದ 80 ಮಕ್ಕಳು ಪಾಠ ಕಲಿಯಲು ತೊಂದರೆಯಾಗುತ್ತಿದೆ ಹಾಗಾಗಿ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.
ಈ ಕೂಡಲೇ ಶಿಕ್ಷಣಾಧಿಕಾರಿಗಳು ಮಕ್ಕಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸುವ ನಿಟ್ಟಿನಲ್ಲಿ ಹೆಚ್ಚುವರಿ ತರಗತಿ ಕೋಣೆ ನಿರ್ಮಾಣ ಮಾಡಬೇಕು ಮತ್ತು ಅತಿಥಿ ಶಿಕ್ಷಕರನ್ನು ನೇಮಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ವೇಳೆ ನಮ್ಮ ಕರ್ನಾಟಕ ಸೇನೆಯ ವಾಡಿ ಅಧ್ಯಕ್ಷ ಸಿದ್ದು ಎಸ್ ಪೂಜಾರಿ, ತಾಲೂಕು ಸಂಘಟನಾ ಸಂಚಾಲಕ ಅಂಬರೀಷ್ ಮಾಳಗಿ ಮತ್ತು ವಾಡಿ ಪ್ರಧಾನ ಕಾರ್ಯದರ್ಶಿ ತುಳಸಿರಾಮ್ ಶಿಂದೆ, ಲಾಡ್ಲಾಪುರ ಅಧ್ಯಕ್ಷ ಅಂಬರೀಷ್ ಜಾಲಹಳ್ಳಿ, ಆಶಪ್ಪ ದಂಡುಬಾ, ಸಾಯಬಣ್ಣ ನಕಾಲಿ ಉಪಸ್ಥಿತರಿದ್ದರು.