ಮದ್ದೂರು ಘಟನೆ ಪೂರ್ವಯೋಜಿತ ಕೃತ್ಯ, ಇದರಲ್ಲಿ ಭಾಗಿಯಾದ ಸಮಾಜಘಾತುಕರಿಗೆ ಕಠಿಣ ಶಿಕ್ಷಗೆ ಗುರಿಪಡಿಸಲು ವೀರಣ್ಣ ಯಾರಿ ಆಗ್ರಹ
ನಾಗಾವಿ ಎಕ್ಸಪ್ರೆಸ್
ವಾಡಿ: ಮಂಡ್ಯದ ಮದ್ದೂರಿನಲ್ಲಿ ಕಳೆದ ಸೆಪ್ಟೆಂಬರ್ 7 ರಂದು ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕಲ್ಲು ತೂರಾಟದ ವೇಳೆ ಬೀದಿ ದೀಪಗಳನ್ನು ಆಫ್ ಮಾಡಿದ್ದು ಇದು ಪೂರ್ವ ಯೋಜಿತ ಕೃತ್ಯವಾಗಿದೆ ಇದರಲ್ಲಿ ಭಾಗಿಯಾದ ಸಮಾಜಘಾತುಕರಿಗೆ ಸಾರ್ವಜನಿಕವಾಗಿ ಕಠಿಣ ಶಿಕ್ಷಗೆ ಗುರಿಪಡಿಸಬೇಕು ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಹಿಂದೂ ಹಬ್ಬಗಳು, ಗಣಪತಿ ಉತ್ಸವ ಹಾಗೂ ಮೆರವಣಿಗೆಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿ ಬಿಟ್ಟಿವೆ, ಇಂತಹವುಗಳಿಗೆ ಮಟ್ಟಹಾಕುವುದು ಬಿಟ್ಟು, ಅನ್ಯಾಯದ ವಿರುದ್ಧ ಹೋರಾಡಿದರೆ ಲಾಠಿ ಚಾರ್ಜ್ ಮಾಡುತ್ತಾ ನಮ್ಮ ತಾಳ್ಮೆ ಕೆಣುಕುತ್ತಿದ್ದಾರೆ. ಇಂತಹ ತಾರತಮ್ಯ ಮನಸ್ಥಿತಿಯ ಸರ್ಕಾರದ ವಿರುದ್ಧ ಜನ ಆಕ್ರೋಶಗೊಳ್ಳುತ್ತಿದ್ದು, ಸರ್ಕಾರ ಇದರ ಗಂಭೀರ ಪರಿಣಾಮ ಎದುರಿಸುವ ಕಾಲ ಸನಿಹವಾದಂತಿದೆ ಎಂದು ತಿಳಿಸಿದ್ದಾರೆ.
ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತೆ ಸರ್ಕಾರದ ನಡೆ ಆಗಿದೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿರುವ ಪರಿಣಾಮದಿಂದ ಇಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
