Oplus_0

ವಿಶ್ವವಾಣಿ ಪತ್ರಿಕೆಯ ಕಚೇರಿ ಉದ್ಘಾಟನೆ, ಪತ್ರಿಕಾ ರಂಗ ಸಂವಿಧಾನದ ನಾಲ್ಕನೇ ಅಂಗವಿದ್ದಂತೆ: ಕಂಬಳೇಶ್ವರ ಶ್ರೀ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಸಂವಿಧಾನದ ಮೂರು ಅಂಗಗಳಾದ ಶಾಸಕಾಂಗ, ಕಾರ್ಯಾಂಗ ನ್ಯಾಯಾಂಗದ ಜೊತೆ ಪತ್ರಿಕಾ ರಂಗ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕಂಬಳೇಶ್ವರ ಶ್ರೀ ಸೋಮಶೇಖರ ಶಿವಾಚಾರ್ಯರು ಹೇಳಿದರು.

ಪಟ್ಟಣದ ಬಜಾಜ್ ಕಾಂಪ್ಲೆಕ್ಸ್ ನಲ್ಲಿ ಸೋಮವಾರ ಪತ್ರಕರ್ತ ಅನಂತನಾಗ್ ದೇಶಪಾಂಡೆ ಅವರ ವಿಶ್ವವಾಣಿ ಪತ್ರಿಕೆಯ ನೂತನ ಕಚೇರಿ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಮಾಜದಲ್ಲಿನ ಅಂಕುಡೊಂಕುಗಳನ್ನು ಮತ್ತು ಸರಿ ತಪ್ಪುಗಳನ್ನು ತಿದ್ದುವ ಕೆಲಸ ಪತ್ರಕರ್ತರು ಮಾಡುತ್ತಾರೆ ಎಂದು ಹೇಳಿದರು.

ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಮಾತನಾಡಿ, ಪತ್ರಿಕೆಯ ಕಚೇರಿ ಇದ್ದಾಗ ಸುದ್ದಿ ತಲುಪಿಸಲು ಅನುಕೂಲ ಆಗಲಿದೆ ಈ ನಿಟ್ಟಿನಲ್ಲಿ ವಿಶ್ವವಾಣಿ ವರದಿಗಾರ ಅನಂತನಾಗ್ ದೇಶಪಾಂಡೆ ಅವರು ತಮ್ಮ ಪತ್ರಿಕೆಯ ಕಚೇರಿ ಆರಂಭ ಮಾಡಿರುವುದು ಉತ್ತಮ ಕೆಲಸ ಎಂದು ಬಣ್ಣಿಸಿದರು. ತಾಲೂಕು ಕೇಂದ್ರ ಸ್ಥಾನದಲ್ಲಿ ಪತ್ರಕರ್ತರ ಕಚೇರಿ ಪ್ರಾರಂಭಿಸುವ ಕೆಲಸ ಮಾಡಿ ಅದಕ್ಕೆ ಬೇಕಾದ ಸಹಾಯ, ಸಹಕಾರ ಮಾಡಲು ಸಿದ್ಧನಿದ್ದೇನೆ ಎಂದು ಹೇಳಿದರು.

ನ್ಯಾಯವಾದಿ ಚಂದ್ರಶೇಖರ ಅವಂಟಿ ಮಾತನಾಡಿ, ಪತ್ರಕರ್ತರಾದವರು ರಾಜಕಾರಣಿಗಳ ಹಗರಣಗಳು ಹಾಗೂ ಭ್ರಷ್ಟಾಚಾರದ ಬಗ್ಗೆ ಪತ್ರಿಕೆಗಳಲ್ಲಿ ಬರೆಯುವ ಮೂಲಕ ಹೊರತಂದಿದ್ದಾರೆ. ಹೀಗಾಗಿ ಸಮಾಜದಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾಗಿದೆ ಈ ನಿಟ್ಟಿನಲ್ಲಿ ಸತ್ಯಾಂಶವನ್ನು ಬರೆಯುವುದು ಪತ್ರಕರ್ತರ ಬಹುದೊಡ್ಡ ಜವಾಬ್ದಾರಿಯಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪುರಸಭೆ ಮಾಜಿ ಮತ್ತು ಹಾಲಿ ಸದಸ್ಯ ಮಲ್ಲಿಕಾರ್ಜುನ ಕಾಳಗಿ, ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಹಿರಿಯ ಪತ್ರಕರ್ತ ಕಾಶಿನಾಥ ಗುತ್ತೇದಾರ ವೇದಿಕೆಯಲ್ಲಿದ್ದರು.

ಈ ಸಂದರ್ಭದಲ್ಲಿ ಪತ್ರಕರ್ತರಾದ ಮಲ್ಲಿಕಾರ್ಜುನ ಮುಡಬೂಳಕರ್, ವಿರೇಂದ್ರ ಕೊಲ್ಲೂರು, ಸಂತೋಷಕುಮಾರ ಕಟ್ಟಿಮನಿ, ಮಂಜುನಾಥ ಸ್ವಾಮಿ, ಈಡಿಗ ಸಮಾಜದ ತಾಲೂಕು ಅಧ್ಯಕ್ಷ ಶಂಕರಗೌಡ ರಾವೂರಕರ್ ಲೀಡರ್, ಮಡಿವಾಳ ಸಮಾಜದ ತಾಲೂಕು ಅಧ್ಯಕ್ಷ ಸಾಯಬಣ್ಣ ಮಡಿವಾಳ, ಕರವೇ ಅಧ್ಯಕ್ಷ ನರಹರಿ ಕುಲಕರ್ಣಿ, ಡಿಎಸ್ಎಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಬೆಣ್ಣೂರಕರ್, ಶ್ರಿಕಾಂತ್ ಶಿಂಧೆ, ಮಲ್ಲಿಕಾರ್ಜುನ ಸಂಗಾವಿ, ಪ್ರಜ್ವಲ್ ಬೆಣ್ಣೂರಕರ್, ನರಸಪ್ಪ ಚಿನ್ನಾಕಟ್ಟಿ, ಅಂಬರೀಷ್ ರಂಗನೂರ್ ಸೇರಿದಂತೆ ಅನೇಕರು ಇದ್ದರು. ಪತ್ರಕರ್ತ ಅನಂತನಾಗ್ ದೇಶಪಾಂಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಉದಯಕುಮಾರ್ ಸಾಗರ ನಿರೂಪಿಸಿದರು.

Spread the love

Leave a Reply

Your email address will not be published. Required fields are marked *

error: Content is protected !!