ದಿ.8 ರಂದು ಬೊಮ್ಮನಹಳ್ಳಿ ಗ್ರಾಮದಲ್ಲಿ ಮೆ: ದಿ ರಾಮ್ಕೊ ಸಿಮೆಂಟ್ಸ್ ಲಿಮಿಟೆಡ್ ವತಿಯಿಂದ ಪರಿಸರ ಸಾರ್ವಜನಿಕ ಆಲಿಕೆ ಸಭೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಮೆ: ದಿ ರಾಮ್ಕೊ ಸಿಮೆಂಟ್ಸ್ ಲಿಮಿಟೆಡ್ ರವರು ಚಿತ್ತಾಪುರ ತಾಲೂಕಿನ ಬೊಮ್ಮನಹಳ್ಳಿ ಮತ್ತು ಕರದಾಳ ಗ್ರಾಮಗಳಲ್ಲಿರುವ ಬೊಮ್ಮನಹಳ್ಳಿ ಸುಣ್ಣದಕಲ್ಲು ಗಣಿ ಬ್ಲಾಕ್ (ಇ-ಹರಾಜು ಮಾಡಿದ ಗಣಿ ಬ್ಲಾಕ್) ನಿಂದ 4.0 MTPA ಉತ್ಪಾದನಾ ಸಾಮರ್ಥ್ಯದ ಸುಣ್ಣದ ಕಲ್ಲು, ಮೇಲಿನ ಮಣ್ಣು 2,14321 M’, ಅಧಿಕ ಭಾರ (Over Burden) 0.46 MTPA ಜೊತೆಗೆ 1000 TPH ಸಾಮರ್ಥ್ಯದ ಕ್ರಷರ್ 500 ΤΡΗ ಸಾಮರ್ಥ್ಯದ ವೊಬ್ಲರ್ ಮತ್ತು ಸ್ಕ್ರೀನ್, 1200 TPH ಸಾಮರ್ಥ್ಯದ ಬೆಲ್ಟ್ ಕನ್ವೆಯರ್ಗಳನ್ನು ಒಟ್ಟು 500 ಹೇಕ್ಟೇರ್ ಪ್ರದೇಶದಲ್ಲಿ ಸ್ಥಾಪಿಸಲು ಉದ್ದೇಶಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಉದ್ದೇಶಿತ ಯೋಜನೆಯ ಪರಿಸರ ಸಾರ್ವಜನಿಕ ಆಲಿಕೆ ಸಭೆಯನ್ನು ಜಿಲ್ಲಾಧಿಕಾರಿಗಳು, ಕಲಬುರಗಿ ಇವರ ನಿರ್ದೇಶನದಂತೆ ಅಕ್ಟೋಬರ್ 8 ರಂದು ಬೆಳಿಗ್ಗೆ 11.00 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಲಬುರ್ಗಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ತಿಳಿಸಿದ್ದಾರೆ.
ಸದರಿ ಸಭೆಯನ್ನು ಜಿಲ್ಲಾಧಿಕಾರಿಗಳು, ಕಲಬುರಗಿ ಜಿಲ್ಲೆ ಇವರ ಅಧ್ಯಕ್ಷತೆಯಲ್ಲಿ ಯೋಜನಾ ಸ್ಥಳ, ಸರ್ವೆ ನಂ.91, ಬೊಮ್ಮನಹಳ್ಳಿ ಗ್ರಾಮ, ಬೊಮ್ಮನಹಳ್ಳಿ ಕ್ರಾಸ್, ಚಿತ್ತಾಪುರ-ಆಲೂರ ರಸ್ತೆ, ಚಿತ್ತಾಪುರ ತಾಲೂಕ, ಕಲಬುರಗಿ ಜಿಲ್ಲೆ ಇಲ್ಲಿ ನಡೆಸಲಾಗುತ್ತದೆ. ಯೋಜನಾ ಸ್ಥಳದಲ್ಲಿ ವಾಸವಾಗಿರುವ ಆಸಕ್ತ ನಿವಾಸಿಗಳು, ಪರಿಸರಾಸಕ್ತ ಗುಂಪುಗಳು ಮತ್ತು ಈ ಯೋಜನೆಯಿಂದ ತೊಂದರೆಗೊಳಗಾಗಬಹುದಾದ ಸಾರ್ವಜನಿಕರು ತಮ್ಮ ಸಲಹೆಗಳು, ಅನಿಸಿಕೆಗಳು, ಟೀಕೆ-ಟಿಪ್ಪಣಿಗಳು ಹಾಗೂ ಅಹವಾಲುಗಳನ್ನು ಮೌಖಿಕ/ಲಿಖಿತ/ಇ-ಮೇಲ್ ಮೂಲಕ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ/ಅಧ್ಯಕ್ಷರು, ಪರಿಸರ ಸಾರ್ವಜನಿಕ ಸಮಿತಿ (ಜಿಲ್ಲಾಧಿಕಾರಿಗಳು, ಕಲಬುರಗಿ ಜಿಲ್ಲೆ, ಕಲಬುರಗಿ) ಇವರಿಗೆ ಸಲ್ಲಿಸತಕ್ಕದ್ದು, ಇಚ್ಛೆಯುಳ್ಳ ಸಾರ್ವಜನಿಕರು ಮೇಲೆ ತಿಳಿಸಿರುವ ದಿನದಂದು ಪರಿಸರ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಹಾಗೂ ತಮ್ಮ ಅಹವಾಲನ್ನು ಲಿಖಿತ ರೂಪದಲ್ಲಿಯೂ ಸಹ ಸಭೆಯಲ್ಲಿ ಸಲ್ಲಿಸಬಹುದಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.