Oplus_0

ರಾವೂರಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ, ಮಕ್ಕಳು ಹೆಚ್ಚು ವಿಜ್ಞಾನದ ಆಸಕ್ತಿಯನ್ನು ಬೆಳೆಸಿಕೊಳ್ಳಲು: ಸಿದ್ದಲಿಂಗ ಸ್ವಾಮೀಜಿ ಕರೆ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: 21ನೇ ಶತಮಾನದ ವಿಜ್ಞಾನ ತಂತ್ರಜ್ಞಾನದ ಕಾಲ, ಅನೇಕ ಆವಿಷ್ಕಾರ ನಡೆಯುತ್ತಿರುವ ಸಮಯದಲ್ಲಿ ಪ್ರತಿಯೊಬ್ಬರೂ ವಿಜ್ಞಾನದ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ರಾವೂರ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು.

ರಾವೂರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಇಕೋ ಕ್ಲಬ್ ವತಿಯಿಂದ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಕ್ರಿಯಾಶೀಲತೆ ಹಾಗೂ ಸೃಜನಶಿಲತೆಯನ್ನು ಬೆಳೆಸಲು ಇಂತಹ ವಿಜ್ಞಾನ ವಸ್ತು ಪ್ರದರ್ಶನಗಳು ಪೂರಕವಾಗಿ ಕೆಲಸಮಾಡುತ್ತವೆ. ಆಸಕ್ತಿ ಇದ್ದಾಗ ಮಾತ್ರ ಏನಾದರೊಂದು ಸಾಧನೆ ಮಾಡಲು ಸಾಧ್ಯ. ಆದ್ದರಿಂದ ಮಕ್ಕಳು ವಿಜ್ಞಾನದ ಕಡೆಗೆ ಹೆಚ್ಚಿನ ಆಸಕ್ತಿ ವಹಿಸಿ ಹೊಸ ಹೊಸ ಆವಿಷ್ಕಾರ ಮಾಡುವತ್ತ ಪ್ರಯತ್ನ ಮಾಡಿ ಎಂದು ಕಿವಿಮಾತು ಹೇಳಿದರು.

ಮುಖ್ಯ ಅತಿಥಿಯಾಗಿ ಬಿಆರ್ ಸಿ ರಮೇಶ್ ಮಾತನಾಡಿ, ಮಠದ ಮಕ್ಕಳು ತಮ್ಮ ಪ್ರಭೆಯನ್ನು ಬಳಸಿ ಉತ್ತಮ ಪ್ರಯೋಗಗಳನ್ನು, ಮಾಡೆಲ್ ಹಾಗೂ ಚಾರ್ಟ್ ಗಳನ್ನು ತಯಾರಿಸಿದ್ದಾರೆ. ಮಕ್ಕಳಲ್ಲಿ ಪ್ರತಿಭೆ ಇದೆ ಅದನ್ನು ಗುರುತಿಸಿ ಹೊರತರುವ ಪ್ರಯತ್ನವನ್ನು ಇಲ್ಲಿನ ವಿಜ್ಞಾನ ಶಿಕ್ಷಕಿಯರು ಯಶಸ್ವಿಯಾಗಿ ಮಾಡುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಹಕಾರ್ಯದರ್ಶಿ ಈಶ್ವರ ಬಾಳಿ, ಮುಖ್ಯಗುರು ವಿದ್ಯಾಧರ ಖಂಡಾಳ, ವಿಜ್ಞಾನ ಶಿಕ್ಷಕಿಯರಾದ ಸುಗುಣಾ ಕೊಳಕೂರ, ಗೀತಾ ಜಮಾದಾರ, ಸುವರ್ಣ ಮಠಪತಿ, ಸಿದ್ದಲಿಂಗ ಬಾಳಿ, ಶಿವಕುಮಾರ ಸರಡಗಿ, ವಿಜಯಲಕ್ಷ್ಮಿ ಬಮ್ಮನಳ್ಳಿ ಸೇರಿದಂತೆ ಶಿಕ್ಷಕರು, ಪಾಲಕರು, ಮಕ್ಕಳು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!