ಶಹಾಬಾದ ತಹಸೀಲ್ ಕಚೇರಿಯಲ್ಲಿ ಮಹರ್ಷಿ ಭಗೀರಥ ಜಯಂತಿ ಆಚರಣೆ
ನಾಗಾವಿ ಎಕ್ಸಪ್ರೆಸ್
ಶಹಾಬಾದ: ನಗರದ ತಹಸೀಲ್ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಭಾನುವಾರ ಮಹರ್ಷಿ ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು.
ಗ್ರೇಡ್ 2 ತಹಸೀಲ್ದಾರ್ ಗುರುರಾಜ್ ಸಂಗಾವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನಮನಗಳು ಸಲ್ಲಿಸಿದರು. ಈ ಸಂದರ್ಭದಲ್ಲಿ ಎಫ್ಡಿಎ ಮುನೀರ್, ಉಪ್ಪಾರ ಸಮಾಜದ ತಾಲೂಕು ಅಧ್ಯಕ್ಷ ವಸಂತಕುಮಾರ್ ಚೂರಿ, ಉಪಾಧ್ಯಕ್ಷ ಹಣಮಂತ ಶಾಲಿ ತರನಳ್ಳಿ ಸೇರಿದಂತೆ ಕಾಟಂದೇವರಹಳ್ಳಿ ಉಪ್ಪಾರ ಸಮುದಾಯ ಮುಖಂಡರು ತಹಸೀಲ್ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.