ಸಚಿವ ಪ್ರಿಯಾಂಕ್ ಖರ್ಗೆ ವೈಯಕ್ತಿಕ ಹಣದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾದರಿ ಪ್ರಶ್ನೆ ಪತ್ರಿಕೆ ಕೈಪಿಡಿ ವಿತರಣೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ವೈಯಕ್ತಿಕ ಹಣದಿಂದ ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷೆಗೆ ಸಹಾಯವಾಗಲೆಂದು ಪಠ್ಯಪುಸ್ತಕ ಅನುಗುಣವಾಗಿ ಮಾದರಿ ಪ್ರಶ್ನೆ ಪತ್ರಿಕೆ ಕೈಪಿಡಿವುಳ್ಳ 35,000 ಪುಸ್ತಕಗಳನ್ನು ವಿತರಿಸಲಾಗುತ್ತಿದ್ದು, ಜ.26 ರಂದು ಕಲಬುರಗಿಯಲ್ಲಿ ಸಾಂಕೇತಿಕವಾಗಿ ಐವರು ಮಕ್ಕಳಿಗೆ ನೀಡಿದ್ದಾರೆ.
ಚಿತ್ತಾಪುರ ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ 4800 ಮಾದರಿ ಪ್ರಶ್ನೆ ಪತ್ರಕೆಗಳನ್ನು ನೀಡಿರುತ್ತಾರೆ. ಸೋಮವಾರ ಶೇ.95 ಶಾಲೆಗಳಿಗೆ ವಿತರಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ತಿಳಿಸಿದ್ದಾರೆ.

