ಜ. 3 ರಂದು ಸುಗೂರ.ಎನ್ ಶ್ರೀ ಮಠದಲ್ಲಿ ಶ್ರೀ ಡಾ.ಕುಮಾರ ಭೋಜರಾಜರ ಜನ್ಮ ದಿನ ಸಂಭ್ರಮ | 1008 ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಸುಗೂರ.ಎನ್ ಗ್ರಾಮದಲ್ಲಿ ಜನವರಿ 3 ರಂದು ಶನಿವಾರ ದಿನದಂದು ಶ್ರೀ ಭೋಜಲಿಂಗೇಶ್ವರ ಮಠದ ಪೀಠಾದಿಪತಿಗಳಾದ ಪೂಜ್ಯ ಶ್ರೀ ಹಿರಗಪ್ಪ ತಾತನವರ ದಿವ್ಯ ನೇತೃತ್ವದಲ್ಲಿ ಹಾಗೂ ಸುಪುತ್ರರಾದ ಅಭಿನವ ಡಾ.ಕುಮಾರ ಭೋಜರಾಜರ 30 ನೇ ವರ್ಷದ ಹುಟ್ಟು ಹಬ್ಬದ ನಿಮಿತ್ತ ಸಂಜೆ 5 ಗಂಟೆಗೆ 1008 ಸುಮಂಗಲಿಯರಿಗೆ ಉಡಿ ತುಂಬುವ ಹಾಗೂ ತುಲಾಭಾರ ಕಾರ್ಯಕ್ರಮ ನೇರವೇರಲಿದೆ ಎಂದು ಶ್ರೀ ಭೋಜಲಿಂಗೇಶ್ವರ ಮಠದ ಪೀಠಾದಿಪತಿ ಪೂಜ್ಯ ಶ್ರೀ ಹಿರಗಪ್ಪ ತಾತನವರು ತಿಳಿಸಿದ್ದಾರೆ.
ಶ್ರೀ ಕುಮಾರ ಭೋಜರಾಜರ ಹಾಗೂ ಶ್ರಿ ಹಿರಗಪ್ಪ ತಾತನವರಿಗೆ ಹಂಪನಗೌಡ ಭಕ್ತರಿಂದ ತುಲಾಭಾರ, ಮತ್ತು ಸುಗೂರ ಎನ್ ಭಕ್ತರಿಂದ ಕೇಕ್ ಸೇವೆ ಸೇರಿದಂತೆ ಹಲವು ದಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಇದೇ ಸಂಧರ್ಭದಲ್ಲಿ ಸಮಾಜಮುಖಿ ಕಾರ್ಯಗಳನ್ನು ಆಯೋಜನೆ ಮಾಡಲಾಗಿರುತ್ತದೆ. ಶ್ರೀ ಭೋಜಲಿಂಗೇಶ್ವರ ಮಠದ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಶಾಲಾ ಮಕ್ಕಳಿಗೆ ಹಡಪದ ಅಪ್ಪಣ್ಣ ಸಮಾಜದ ನಿಸ್ವಾರ್ಥ ಸೇವಕ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರಿಂದ ಉಚಿತವಾಗಿ ಕ್ಷೌರ ಸೇವೆ ಸಲ್ಲಿಸಲಾಗುವುದು. ಹಾಗೇ ಕಲಬುರಗಿ ಜಿಲ್ಲೆಯ ಸ್ಟಾರ್ ಕೇರ್ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ಹಾಗೂ ಸ್ಟಾರಾ ಲೈಫ್ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮತ್ತು ವೇದಾ ಕಣ್ಣಿನ ಆಸ್ಪತ್ರೆ ಯಾದಗಿರ ಅವರ ಕಡೆಯಿಂದ ಉಚಿತ ಆರೋಗ್ಯ ತಪಾಸಣೆ ಶಿಭಿರ ಮತ್ತು ನವ ಜೀವನ ರಕ್ತದಾನ ಕೇಂದ್ರ ಕಲಬುರಗಿ ಈ ಆರೋಗ್ಯ ಶಿಬಿರ ಕಾರ್ಯಕ್ರಮ ಶ್ರೀ ಮಠದ ಆವರಣದಲ್ಲಿ ಅಥವಾ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಗಿರುತ್ತದೆ. ಇದೇ ಜನವರಿ -3 ರಂದು ಶನಿವಾರ ಬೆಳಿಗ್ಗೆ 10 ರಿಂದ ಸಂಜೆಯ ವರೆಗೂ ಈ ಆರೋಗ್ಯ ತಪಾಸಣೆ ಶಿಭಿರ ಇರುವುದರಿಂದ ಇದರ ಸದುಪಯೋಗ ಶ್ರೀ ಮಠದ ಸಂಧ್ಬಕ್ತರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಸುಗೂರ ಎನ್ ಗ್ರಾಮಸ್ಥರು ಆರೋಗ್ಯ ತಪಾಸಣೆ ಮಾಡಿಕೊಳ್ಳಿ, ಬಿ.ಪಿ ಶುಗರ್ ಹಾಗೂ ಮೊಣಕಾಲಿನ ಕೀಲುಗಳ ನೋವು ಮತ್ತು ಯಾದಗಿರ ಜಿಲ್ಲೆಯ ವೇದಾ ಕಣ್ಣಿನ ಆಸ್ಪತ್ರೆಯ ತಜ್ಞರು ಹಾಗೂ ಮಕ್ಕಳಿಗೆ ಗರ್ಭಿಣಿಯರಿಗೆ ವಿವಿಧ ರೀತಿಯಲ್ಲಿ ಸೇವೆ ನಡೆಯಲಿದೆ. ಈ ಸಮಾಜಮುಖಿ ಕಾರ್ಯಗಳನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಊರಿನ ಪ್ರಮುಖರಾದ ಶರಣಗೌಡ ಬೆನಕನಹಳ್ಳಿ, ಭೀಮರೆಡ್ಡಿ ಗೌಡ ಕುರಾಳ ಸುಗೂರ ಎನ್, ವಿಶ್ವನಾಥ ರೆಡ್ಡಿ ಪಾಟೀಲ್ ಸುಗೂರ ಎನ್, ಈರಣ್ಣ ಬಲಕಲ್ ಯಾದಗಿರ, ಶಿಕ್ಷರ ಶರಣಬಸಪ್ಪ ನಾಸಿ, ಸಿದ್ರಾಮರೆಡ್ಡಿ ಗೌಡ ಬೆನಕನಹಳ್ಳಿ ಸೇರಿದಂತೆ ಸಿದ್ದು ಗೌಡ ಕುರಾಳ, ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ಮನವಿ ಮಾಡಿದ್ದಾರೆ.
