ತೊಗರಿ ಮಂಡಳಿ ಅಧ್ಯಕ್ಷ ಸೈಯದ್ ಮಹಿಮೂದ್ ಸಾಹೇಬ್ ಡೋಣಗಾಂವ ಗ್ರಾಮ ಪಂಚಾಯಿತಿಗೆ ಭೇಟಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಡೋಣಗಾಂವ ಗ್ರಾಮ ಪಂಚಾಯತ್ ಕಾರ್ಯಾಲಯಕ್ಕೆ ಗುರುವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ (ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ) ಅಧ್ಯಕ್ಷ ಸೈಯದ್ ಮಹಿಮೂದ್ ಸಾಹೇಬ್ ಅವರಿಗೆ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ವೇಳೆ ವಿಎಸ್ಸೆಸ್ಎನ್ ತೊಗರಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಖರೀದಿ ಕೇಂದ್ರದ ಅಥವಾ ರೈತರಿಗೆ ಸಂಬಂಧಿಸಿದಂತೆ ಏನಾದರೂ ತೊಂದರೆ ಸಮಸ್ಯೆಗಳು ಇದ್ದರೆ ಗಮನಕ್ಕೆ ತನ್ನಿ ನಾನು ಅದಕ್ಕೆ ಪರಿಹಾರ ನೀಡುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶರಣಪ್ಪ ಹೊನ್ನಪುರ, ಮಲ್ಲಿಕಾರ್ಜುನ ಹೊನ್ನಪುರ, ಕಾಶಪ್ಪ ಡೋಣಗಾಂವ, ಶರಣಗೌಡ ಪೊಲೀಸ್ ಪಾಟೀಲ, ದೇವು ಹಲಕರ್ಟಿ, ಅಶೋಕ ಬಾನರ್, ಶಿವು ಮೆಂಗಾನೋರ್, ಅಹ್ಮದ್ ಕೊರಬಾ, ಮಹಿಮೂದ್ ಖುರೇಷಿ, ವಿಎಸ್ಸೆಸ್ಎನ್ ಅಧ್ಯಕ್ಷ ಸಿದ್ರಾಮಪ್ಪ ಮೆಂಗಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

