ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರಿಗೆ ಚಿತ್ತಾಪುರ ಬಿಜೆಪಿ ಮುಖಂಡರಿಂದ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ವಿಧಾನ ಪರಿಷತ್ ನಲ್ಲಿ ಬಿಜೆಪಿ ಮುಖ್ಯ ಸಚೇತಕರಾಗಿ ನೇಮಕಗೊಂಡ ಎನ್.ರವಿಕುಮಾರ್ ಅವರಿಗೆ ಚಿತ್ತಾಪುರ ಮಂಡಲ ಬಿಜೆಪಿ ಮುಖಂಡರು ಬೆಂಗಳೂರಿನ ಅವರ ಕಚೇರಿಯಲ್ಲಿ ಸನ್ಮಾನಿಸಿ ಶುಭಾಶಯಗಳು ಕೋರಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಹಾಗೂ ಮೊಗಲಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ತಮ್ಮಣ್ಣ ಡಿಗ್ಗಿ, ಪುರಸಭೆ ಮಾಜಿ ಸದಸ್ಯ ದಶರಥ ದೊಡ್ಡಮನಿ, ಗ್ರಾಪಂ ಸದಸ್ಯ ನಾಗರಾಜ್ ಮುತ್ತಗಿ, ಮಹಾದೇವ ಮುಗುಟಿ ಇದ್ದರು.
ಸತತ ಎರಡನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ನೇಮಕಗೊಂಡಿರುವ ರವಿಕುಮಾರ್ ಈ ಹಿಂದೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ವಿಶೇಷವಾಗಿ ಕಲಬುರಗಿ ಜಿಲ್ಲೆಯಲ್ಲಿ ಸಂಘಟನೆ ಮೂಲಕ ಹೆಚ್ಚು ಜನ ಮಣ್ಣನೆ ಪಡೆದಿದ್ದಾರೆ.